ಮನರಂಜನೆ

‘ಲಿಯೋ’ ದಾಖಲೆಯನ್ನು ಮುರಿಯುತ್ತಾ ರಜನಿಕಾಂತ್ ‘ಕೂಲಿ’?

ರಜನಿಕಾಂತ್‍ ಅಭಿನಯದ ‘ಕೂಲಿ’ ಹೊಸ ದಾಖಲೆ ಬರೆಯುವುದಕ್ಕೆ ಮುಂದಾಗಿದೆ. ಚಿತ್ರವು ಆಗಸ್ಟ್.14ರಂದು ಬಿಡುಗಡೆಯಾಗುತ್ತಿದ್ದು, ಜಗತ್ತಿನಾದ್ಯಂತ ಮೊದಲ ದಿನದ ಅಡ್ವಾನ್ಸ್ ಬುಕ್ಕಿಂಗ್‍ನಿಂದ 50 ಕೋಟಿ ರೂ. ಗಳಿಕೆಯಾಗಿದೆ. ಈ ಮೊತ್ತ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಾಗುವ ನಿರೀಕ್ಷೆ ಇದ್ದು, ಮೊದಲ ದಿನವೇ ಚಿತ್ರದ ಗಳಿಕೆ 100 ಕೋಟಿ ರೂ. ಮೀರಬಹುದು ಎಂದು ಅಂದಾಜಿಸಲಾಗಿದೆ.

ತಮಿಳು ಚಿತ್ರಗಳು ನೂರು ಕೋಟಿ ಕ್ಲಬ್‍ಗೆ ಸೇರುತ್ತಿರುವುದು ಹೊಸ ವಿಷಯವೇನಲ್ಲ. ಅಂಥದ್ದೊಂದು ಸಾಹಸ ಮೊದಲಿಗೆ ಮಾಡಿದ್ದು ರಜನಿಕಾಂತ್‍ ಅಭಿನಯದ ‘ಶಿವಾಜಿ – ದಿ ಬಾಸ್‍’. ಅಲ್ಲಿಂದ ಇಲ್ಲಿಯವರೆಗೂ ಹಲವು ತಮಿಳು ಚಿತ್ರಗಳು ನೂರು ಕೋಟಿ ರೂ. ಕ್ಲಬ್‍ ಸೇರಿವೆ.

100 ಕೋಟಿ ರೂ. ಕ್ಲಬ್‍ನಲ್ಲಿ ಕೆಲವು ತಮಿಳು ಚಿತ್ರಗಳಿದ್ದರೂ, ಮೊದಲ ದಿವಸವೇ ಅಂಥದ್ದೊಂದು ದಾಖಲೆ ಮಾಡಿದ್ದು ವಿಜಯ್‍ ಅಭಿನಯದ ‘ಲಿಯೋ’. ಈ ಚಿತ್ರವು ಮೊದಲ ದಿನವೇ 100 ಕೋಟಿ ರೂ. ಕ್ಲಬ್‍ ಸೇರಿತ್ತು. ಆ ಚಿತ್ರವನ್ನು ನಿರ್ದೇಶಿಸಿದ್ದವರು ಲೋಕೇಶ್‍ ಕನಕರಾಜ್‍. ಈಗ ಅವರದ್ದೇ ನಿರ್ದೇಶನದ ‘ಕೂಲಿ’ ಸಹ ಮೊದಲ ದಿನವೇ 100 ಕೋಟಿ ಕ್ಲಬ್‍ ಸೇರುವ ಸೂಚನೆ ನೀಡಿದೆ. ಹಾಗೊಂದು ಪಕ್ಷ ಸೇರಿದರೆ, ಲೋಕೇಶ್ ಕನಕರಾಜ್‍ ತಾವೇ ಮಾಡಿದ ದಾಖಲೆಯನ್ನು ತಾವೇ ಮುರಿದಂತಾಗುತ್ತದೆ.

ಇದುವರೆಗೂ ಸುಮಾರು 6.8 ಲಕ್ಷ ಟಿಕೆಟ್‍ಗಳು ಮಾರಾಟವಾಗಿವೆ ಎಂದು ಹೇಳಲಾಗುತ್ತಿದೆ. ಆ ಸಂಖ್ಯೆ ಮುಂದಿನ ದಿನಗಳಲ್ಲಿ 10 ಲಕ್ಷ ಆಗುವ ನಿರೀಕ್ಷೆ ಇದೆ. ಚಿತ್ರಕ್ಕೆ ಇಷ್ಟೊಂದು ಹೈಪ್‍ ಆಗುವುದಕ್ಕೆ ಪ್ರಮುಖ ಕಾರಣ ಚಿತ್ರದ ತಾರಾಗಣ ಮತ್ತು ಅನಿರುದ್ಧ್ ರವಿಚಂದರ್‍ ಸಂಗೀತ ನಿರ್ದೇಶನದ ಹಾಡುಗಳು.

‘ಕೂಲಿ’ ಚಿತ್ರದಲ್ಲಿ ರಜನಿಕಾಂತ್‍, ಉಪೇಂದ್ರ, ನಾಗಾರ್ಜುನ, ಆಮೀರ್‍ ಖಾನ್‍, ಶ್ರುತಿ ಹಾಸನ್‍, ಶೌಭಿನ್‍ ಶಾಹಿರ್‍ ಮುಂತಾದವರು ನಟಿಸಿದ್ದು, ಲೋಕೇಶ್‍ ಕನಕರಾಜ್‍ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇನ್ನು, ಸನ್‍ ಪಿಕ್ಚರ್ಸ್‌ ಕಲಾನಿಧಿ ಮಾರನ್‍ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

2 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

5 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

6 hours ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

7 hours ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

7 hours ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

7 hours ago