ಮನರಂಜನೆ

‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.

‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್‍ನಲ್ಲಿ ರಜನಿಕಾಂತ್‍ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್‍’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.

ರಜನಿಕಾಂತ್‍ ಅಭಿನಯದ ‘ಜೈಲರ್‍’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ‍ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್‍’ ಚಿತ್ರದ ಮೂಲಕ ರಜನಿಕಾಂತ್‍ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.

ಭೂಮಿಕಾ

Recent Posts

ಕೊಲೆ | ಶವವನ್ನು ಪಾಳು ಮನೆ ಮುಂದೆ ಎಸೆದು ಹೋದ ದುಷ್ಕರ್ಮಿ

ಮಳವಳ್ಳಿ : ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು ಶವವನ್ನು ಆತನ ಪಾಳು ಮನೆ ಮುಂದೆ ಎಸೆದು ಹೋಗಿರುವ ದುಷ್ಕೃತ್ಯವೊಂದು ಮಳವಳ್ಳಿ…

38 mins ago

ಟಿ-20 ವಿಶ್ವಕಪ್‌ : ಇಟಲಿ ಮಣಿಸಿ ದಾಖಲೆ ಬರೆದ ಸ್ಕಾಟ್ಲೆಂಡ್‌

ಕೋಲ್ಕತ್ತಾ : ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಸೋಮವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಸ್ಕಾಟ್ಲೆಂಡ್ ತಂಡ ಇಟಲಿ ವಿರುದ್ಧ…

55 mins ago

ಈ ಊರಲ್ಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದೆ ಬೀಳುತ್ತೆ 30 ಸಾವಿರ ದಂಡ

ನಂಜನಗೂಡು : ಗ್ರಾಮದೇವತೆ ಜಾತ್ರೇಲಿ ಕುಡಿದು ಗಲಾಟೆ ಮಾಡಿದ್ರೆ, ಹೆಣ್ಣು ಮಕ್ಕಳ ವಿಡಿಯೋ ಮಾಡಿದ್ರೆ 30 ಸಾವಿರ ದಂಡ ವಿಧಿಸುವ…

1 hour ago

2027 ಸೆ.3ಕ್ಕೆ ಅಟ್ಲಾಂಟಾದಲ್ಲಿ 9ನೇ ನಾವಿಕ ವಿಶ್ವ ಸಮ್ಮೇಳನ

ಬೆಂಗಳೂರು : ದುಬೈನ ಕರ್ನಾಟಕ ಸಂಘದೊಂದಿಗೆ ನವೆಂಬರ್ 22 ರಂದು ನಾವಿಕ ರಾಜ್ಯೋತ್ಸವ ಮತ್ತು ನಾಟಕೋತ್ಸವವನ್ನು ಆಯೋಜಿಸಲಾಗಿದೆ ಎಂದು ನಾವು…

1 hour ago

ಉಕ್ಕು ಉದ್ಯಮಕ್ಕೆ ಮತ್ತಷ್ಟು ಬಲ ; ₹11,887 ಕೋಟಿ ಹೂಡಿಕೆ

ಹೊಸದಿಲ್ಲಿ : ಭಾರತ ಸರ್ಕಾರವು ಸ್ಪೆಶಾಲಿಟಿ ಸ್ಟೀಲ್ (ವಿಶೇಷ ಉಕ್ಕು) ಉತ್ಪಾದನೆಗೆ ಸಂಬಂಧಿಸಿ ಹೊಸದಾಗಿ ಉತ್ತೇಜನಾ (ಪಿಎಲ್ಐ) ಯೋಜನೆ 1.2…

2 hours ago

ಬಂಡೀಪುರದಲ್ಲಿ ಅಂತರಾಷ್ಟ್ರೀಯ ಬಿಗ್‌ ಕ್ಯಾಟ್‌ ಶೃಂಗಸಭೆ : 23 ದೇಶದ ವಿಜ್ಞಾನಿಗಳು ಭಾಗಿ

ಚಾಮರಾಜನಗರ : ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿಯಲ್ಲಿ ಅಂತರಾಷ್ಟ್ರೀಯ ಬಿಗ್ ಕ್ಯಾಟ್ಸ್ ಅಲಯನ್ಸ್ ಶೃಂಗಸಭೆಯಲ್ಲಿಂದು…

3 hours ago