ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್ನಲ್ಲಿ ರಜನಿಕಾಂತ್ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.
ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.
‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.
ರಜನಿಕಾಂತ್ ಅಭಿನಯದ ‘ಜೈಲರ್’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್’ ಚಿತ್ರದ ಮೂಲಕ ರಜನಿಕಾಂತ್ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…