ಮನರಂಜನೆ

‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.

‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್‍ನಲ್ಲಿ ರಜನಿಕಾಂತ್‍ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್‍’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.

ರಜನಿಕಾಂತ್‍ ಅಭಿನಯದ ‘ಜೈಲರ್‍’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ‍ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್‍’ ಚಿತ್ರದ ಮೂಲಕ ರಜನಿಕಾಂತ್‍ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.

ಭೂಮಿಕಾ

Recent Posts

ಮನೆಯ ಚಾವಣಿ ಕುಸಿದು ನಾಲ್ವರು ಸಾವು ; ತಲಾ 5 ಲಕ್ಷ ಪರಿಹಾರ ಘೋಷಣೆ

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ…

15 hours ago

ಡಿ.ಕೆ.ಶಿವಕುಮಾರ್‌ ಜನ್ಮದಿನಾಚರಣೆ : ರಾರಾಜಿಸಿದ ಮುಂದಿನ ಮುಖ್ಯಮಂತ್ರಿ ಡಿಕೆಶಿ ಬ್ಯಾನರ್‌ಗಳು

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ…

16 hours ago

ದರ್ಶನ್‌ಗೆ ಇನ್ನೂ ಒಂದು ವರ್ಷ ಜಾಮೀನು ಇಲ್ಲ : ಅರ್ಜಿ ವಜಾಗೊಳಿಸಿದ ಸುಪೀಂ

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದ್ದು, ಇನ್ನು ಒಂದು…

16 hours ago

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

18 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

22 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

22 hours ago