ಮನರಂಜನೆ

‘ಮನಸಿಲಾಯೋ’ ಎಂದು ಕುಣಿದ ರಜನಿಕಾಂತ್-ಮಂಜು ವಾರಿಯರ್

ರಜನಿಕಾಂತ್ ನಟನೆಯ ಬಹುನಿರೀಕ್ಷಿತ ಸಿನಿಮಾ ‘ವೆಟ್ಟೈಯಾನ್’ ಬಿಡುಗಡೆಗೆ ಸಜ್ಜಾಗಿದೆ. ಅಕ್ಟೋಬರ್ 10ಕ್ಕೆ ಐದು ಭಾಷೆಗಳಲ್ಲಿ ಜಗತ್ತಿನಾದ್ಯಂತ ಈ ಚಿತ್ರ ತೆರೆಗೆ ಬರಲಿದೆ. ಸದ್ಯ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ಭರದಿಂದ ಸಾಗಿದ್ದು, ಇದೀಗ ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.

‘ಮನಸಿಲಾಯೋ’ ಎಂಬ ಸಾಗುವ ಈ ಹಾಡು, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಹಾಡು ಬಿಡುಗಡೆ ಆಗಿದೆ. ವರ್ಣರಂಜಿತ ಸೆಟ್‍ನಲ್ಲಿ ರಜನಿಕಾಂತ್‍ ಜೊತೆ ಮಂಜು ವಾರಿಯರ್ ಭರ್ಜರಿಯಾಗಿ ಕುಣಿದು ಕುಪ್ಪಳಿಸಿದ್ದಾರೆ. ಅನಿರುದ್ದ್ ರವಿಚಂದರ್ ಈ ಹಾಡಿಗೆ ಸಂಗೀತ ಸಂಯೋಜಿಸಿದ್ದಾರೆ.

ಈ ಹಿಂದೆ ಸೂರ್ಯ ನಟಿಸಿದ ‘ಜೈ ಭೀಮ್’ ಸಿನಿಮಾ ನಿರ್ದೇಶಿಸಿದ್ದ ಟಿ.ಜೆ. ಜ್ಞಾನವೇಲ್, ‘ವೆಟ್ಟೈಯಾನ್’ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಅಮಿತಾಬ್ ಬಚ್ಚನ್ ಹಾಗೂ ರಜನಿಕಾಂತ್ ಈ ಚಿತ್ರದ ಮೂಲಕ ಮೂರು ದಶಕದ ಬಳಿಕ ಮತ್ತೊಮ್ಮೆ ಒಟ್ಟಿಗೆ ನಟಿಸಿದ್ದಾರೆ. 1990ರ ದಶಕದ ಆರಂಭದಲ್ಲಿ ಬಿಡುಗಡೆಯಾಗಿದ್ದ ‘ಹಮ್‍’ ಚಿತ್ರದ ನಂತರ ಅವರಿಬ್ಬರೂ ಯಾವೊಂದು ಸಿನಿಮಾದಲ್ಲೂ ನಟಿಸಿರಲಿಲಲ್ಲ. ಭಾರತೀಯ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಲೈಕಾ ಈ ಸಮಾಗಮಕ್ಕೆ ವೇದಿಕೆ ನಿರ್ಮಿಸಿದೆ.

‘ವೆಟ್ಟೈಯಾನ್’ ಚಿತ್ರದಲ್ಲಿ ರಜನಿಕಾಂತ್ ಹಾಗೂ ಅಮಿತಾಭ್ ಬಚ್ಚನ್ ಜೊತೆಯಲ್ಲಿ ರಾಣಾ ದಗ್ಗುಬಾಟಿ, ಫಹಾದ್ ಫಾಸಿಲ್, ಮಂಜು ವಾರಿಯರ್, ರಿತಿಕಾ ಸಿಂಗ್, ವಿಜಯನ್, ಜಿಎಂ ಸುಂದರ್, ರೋಹಿಣಿ, ಅಭಿರಾಮಿ, ರಾವ್ ರಮೇಶ್, ರಮೇಶ್ ತಿಲಕ್, ರಕ್ಷಣ್ ಸೇರಿದಂತೆ ಇನ್ನೂ ಅನೇಕ ಪ್ರಮುಖ ನಟರು ನಟಿಸಿದ್ದಾರೆ.

ರಜನಿಕಾಂತ್‍ ಅಭಿನಯದ ‘ಜೈಲರ್‍’ ಚಿತ್ರವು ಕಳೆದ ವರ್ಷ ಬಿಡುಗಡೆಯಾಗಿ ದೊಡ್ಡ ಯಶಸ್ಸು ಕಂಡಿತ್ತು. ಆ ನಂತರ ಅವರು ‘ಲಾಲ್ ‍ಸಲಾಮ್’ ಎಂಬ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಂಕ್ರಾಂತಿ ಸಂದರ್ಭದಲ್ಲಿ ಬಿಡುಗಡೆಯಾದ ಈ ಚಿತ್ರ ಬಂದಿದ್ದು, ಹೋಗಿದ್ದು ಗೊತ್ತಾಗಲಿಲ್ಲ. ಇದೀಗ ‘ವೆಟ್ಟೈಯಾನ್‍’ ಚಿತ್ರದ ಮೂಲಕ ರಜನಿಕಾಂತ್‍ ಮತ್ತೆ ದೊಡ್ಗ ಎಂಟ್ರಿ ಕೊಡುವುದಕ್ಕೆ ಸಜ್ಜಾಗಿದ್ದಾರೆ.

ಭೂಮಿಕಾ

Recent Posts

ಬಿಡದಿ ಹೋರಾಟಕ್ಕೆ ಜೆನ್‌-ಝೀ ಗಳು ಬರಲಿ ; ದೇವನೂರು ಮಹದೇವ ಕರೆ

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…

8 hours ago

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

11 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

15 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

17 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

18 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

19 hours ago