ಮನರಂಜನೆ

ಶುರುವಾಗಿ 6 ವರ್ಷಗಳ ನಂತರ ರಾಜು ಜೇಮ್ಸ್ ಬಾಂಡ್ ಬಿಡುಗಡೆಗೆ ಸಿದ್ಧ

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ ಮುಗಿದಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿದೆ.

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ರಾಜು ಜೇಮ್ಸ್ ಬಾಂಡ್ ಚಿತ್ರವು ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎಂದು ಖುದ್ದು ಚಿತ್ರತಂಡ ಹೇಳಿಕೊಂಡಿದೆ.

ಈ ಹಿಂದೆ ಭಾಗ್ಯರಾಜ್‍ ಚಿತ್ರವನ್ನು ನಿರ್ದೇಶಿಸಿದ್ದ ದೀಪಕ್ ಮಧುವನಹಳ್ಳಿ ಕಥೆ ಬರೆದು ನಿರ್ದೇಶಿಸಿದ್ದು, ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈಜಗದೀಶ್ ಮುಂತಾದವರು ನಟಿಸಿದ್ದಾರೆ.

ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಜೊತೆಯಾಗಿ ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಂಜುನಾಥ್‍, ‘ನಾವು ಪೂರ್ತಿ ಚಿತ್ರವನ್ನು ಇದುವರೆಗೂ ಹಲವಾರು ಭಾರಿ ನೋಡಿದ್ದರೂ ಒಂದು ಸಲಕ್ಕೂ ಬೇಸರವಾಗಿಲ್ಲ. ಹೊಟ್ಟೆ ತುಂಬಾ ನಕ್ಕಿದ್ದೇವೆ, ನಮಗೆ ಕತೆ ಗೊತ್ತಿದ್ದರೂ ಕೆಲವು ಸನ್ನಿವೇಶಗಳಲ್ಲಿ ಸೀಟಿನ ತುದಿಯಲ್ಲಿ ಕೂತು ಕುತೂಹಲದಿಂದ ನೋಡಿದ್ದೇವೆ. ಹಾಗಾಗಿ, ಪ್ರೇಕ್ಷಕರಿಗೂ ಇದೇ ಅನುಭವ ನೀಡುವಲ್ಲಿ ನಮ್ಮ ಸಿನಿಮಾ ಯಶ್ವಸಿಯಾಗುವುದು ಎಂದು ನಂಬಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ರಾಜು ಜೇಮ್ಸ್ ಬಾಂಡ್ ಚಿತ್ರವು ಸುಮಾರು ಎರಡು ತಾಸು 16 ನಿಮಿಷಗಳ ಅವಧಿಯದ್ದಾಗಿದ್ದು, ಅದರಲ್ಲಿ ಸುಮಾರು ೪೦ ನಿಮಿಷಗಳು ಪ್ರೇಕ್ಷಕರು ನಗುವಿನ ಅಲೆಯಲ್ಲಿ ತೇಲಾಡಲಿದ್ದಾರಂತೆ. ಚಿತ್ರದ ನಾಲ್ಕು ಹಾಡುಗಳನ್ನು ಲಂಡನ್ ಮತ್ತು ಸುತ್ತಮುತ್ತಲಿನ ಊರುಗಳಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.

ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರತಂಡವು ಹೊಸ ಟೀಸರ್‍ ಬಿಡುಗಡೆ ಮೂಲಕ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ.

ಆಂದೋಲನ ಡೆಸ್ಕ್

Recent Posts

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

1 second ago

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

13 mins ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

38 mins ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

57 mins ago

ಸ್ಯಾಂಡಲ್‌ವುಡ್‌ ಖ್ಯಾತ ನಿರ್ಮಾಪಕ ನರಹಳ್ಳಿ ಜ್ಞಾನೇಶ್‌ ನಿಧನ

ಪಾಂಡವಪುರ: ಸ್ಯಾಂಡಲ್‌ವುಡ್‌ ನಿರ್ಮಾಪಕ, ನಿರ್ದೇಶಕ, ಸಂಕಲನಕಾರ ಹಾಗೂ ಸಂಘಟಕ ನರಹಳ್ಳಿ ಜ್ಞಾನೇಶ್ (೪೮) ಅವರು ಶುಕ್ರವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಾರ್ಯನಿಮಿತ್ತ…

1 hour ago

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು…

1 hour ago