ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ್ಯಾಂಕ್ ರಾಜು ಖ್ಯಾತಿಯ ಗುರುನಂದನ್ ಅಭಿನಯದ ರಾಜು ಜೇಮ್ಸ್ ಬಾಂಡ್ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ ಮುಗಿದಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿದೆ.
ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ರಾಜು ಜೇಮ್ಸ್ ಬಾಂಡ್ ಚಿತ್ರವು ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎಂದು ಖುದ್ದು ಚಿತ್ರತಂಡ ಹೇಳಿಕೊಂಡಿದೆ.
ಈ ಹಿಂದೆ ಭಾಗ್ಯರಾಜ್ ಚಿತ್ರವನ್ನು ನಿರ್ದೇಶಿಸಿದ್ದ ದೀಪಕ್ ಮಧುವನಹಳ್ಳಿ ಕಥೆ ಬರೆದು ನಿರ್ದೇಶಿಸಿದ್ದು, ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈಜಗದೀಶ್ ಮುಂತಾದವರು ನಟಿಸಿದ್ದಾರೆ.
ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಜೊತೆಯಾಗಿ ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಂಜುನಾಥ್, ‘ನಾವು ಪೂರ್ತಿ ಚಿತ್ರವನ್ನು ಇದುವರೆಗೂ ಹಲವಾರು ಭಾರಿ ನೋಡಿದ್ದರೂ ಒಂದು ಸಲಕ್ಕೂ ಬೇಸರವಾಗಿಲ್ಲ. ಹೊಟ್ಟೆ ತುಂಬಾ ನಕ್ಕಿದ್ದೇವೆ, ನಮಗೆ ಕತೆ ಗೊತ್ತಿದ್ದರೂ ಕೆಲವು ಸನ್ನಿವೇಶಗಳಲ್ಲಿ ಸೀಟಿನ ತುದಿಯಲ್ಲಿ ಕೂತು ಕುತೂಹಲದಿಂದ ನೋಡಿದ್ದೇವೆ. ಹಾಗಾಗಿ, ಪ್ರೇಕ್ಷಕರಿಗೂ ಇದೇ ಅನುಭವ ನೀಡುವಲ್ಲಿ ನಮ್ಮ ಸಿನಿಮಾ ಯಶ್ವಸಿಯಾಗುವುದು ಎಂದು ನಂಬಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.
ರಾಜು ಜೇಮ್ಸ್ ಬಾಂಡ್ ಚಿತ್ರವು ಸುಮಾರು ಎರಡು ತಾಸು 16 ನಿಮಿಷಗಳ ಅವಧಿಯದ್ದಾಗಿದ್ದು, ಅದರಲ್ಲಿ ಸುಮಾರು ೪೦ ನಿಮಿಷಗಳು ಪ್ರೇಕ್ಷಕರು ನಗುವಿನ ಅಲೆಯಲ್ಲಿ ತೇಲಾಡಲಿದ್ದಾರಂತೆ. ಚಿತ್ರದ ನಾಲ್ಕು ಹಾಡುಗಳನ್ನು ಲಂಡನ್ ಮತ್ತು ಸುತ್ತಮುತ್ತಲಿನ ಊರುಗಳಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.
ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರತಂಡವು ಹೊಸ ಟೀಸರ್ ಬಿಡುಗಡೆ ಮೂಲಕ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ.
ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು…
ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್ ಆಗಿದೆ. ಅಕ್ಟೋಬರ್.11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…
ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…
ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…
ಬೀಜಿಂಗ್: ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…