ಮನರಂಜನೆ

ಶುರುವಾಗಿ 6 ವರ್ಷಗಳ ನಂತರ ರಾಜು ಜೇಮ್ಸ್ ಬಾಂಡ್ ಬಿಡುಗಡೆಗೆ ಸಿದ್ಧ

ಆರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು ಫಸ್ಟ್ ರ‍್ಯಾಂಕ್ ರಾಜು ಖ್ಯಾತಿಯ ಗುರುನಂದನ್‍ ಅಭಿನಯದ ರಾಜು ಜೇಮ್ಸ್ ಬಾಂಡ್‍ ಚಿತ್ರ. ಆಗಿನ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರು ಚಿತ್ರದ ಮುಹೂರ್ತಕ್ಕೆ ಆಗಮಿಸಿ ಶುಭಕೋರಿದ್ದರು. ಈ ಸುದೀರ್ಘ ಪಯಣದ ನಂತರ ಚಿತ್ರ ಕೊನೆಗೂ ಮುಗಿದಿದ್ದು, ಇದೀಗ ಬಿಡುಗಡೆಗೆ ಸಜ್ಜಾಗಿದೆ.

ಕರ್ಮ ಬ್ರೋಸ್ ಪ್ರೊಡಕ್ಷನ್ಸ್ ನಿರ್ಮಾಣದ ರಾಜು ಜೇಮ್ಸ್ ಬಾಂಡ್ ಚಿತ್ರವು ವರ್ಷದ ಅಂತ್ಯದಲ್ಲಿ ರಾಜ್ಯದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ ಎಂದು ಖುದ್ದು ಚಿತ್ರತಂಡ ಹೇಳಿಕೊಂಡಿದೆ.

ಈ ಹಿಂದೆ ಭಾಗ್ಯರಾಜ್‍ ಚಿತ್ರವನ್ನು ನಿರ್ದೇಶಿಸಿದ್ದ ದೀಪಕ್ ಮಧುವನಹಳ್ಳಿ ಕಥೆ ಬರೆದು ನಿರ್ದೇಶಿಸಿದ್ದು, ಚಿತ್ರದಲ್ಲಿ ಗುರುನಂದನ್, ಮೃದುಲಾ, ಸಾಧು ಕೋಕಿಲ, ಅಚ್ಯುತ್ ಕುಮಾರ್, ಚಿಕ್ಕಣ್ಣ, ರವಿಶಂಕರ್, ಜೈಜಗದೀಶ್ ಮುಂತಾದವರು ನಟಿಸಿದ್ದಾರೆ.

ರಾಜು ಜೇಮ್ಸ್ ಬಾಂಡ್ ಚಿತ್ರವನ್ನು ಮಂಜುನಾಥ್ ವಿಶ್ವಕರ್ಮ (ಲಂಡನ್) ಮತ್ತು ಕಿರಣ್ ಭರ್ತೂರು (ಕ್ಯಾನೆಡಾ) ಜೊತೆಯಾಗಿ ನಿರ್ಮಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಂಜುನಾಥ್‍, ‘ನಾವು ಪೂರ್ತಿ ಚಿತ್ರವನ್ನು ಇದುವರೆಗೂ ಹಲವಾರು ಭಾರಿ ನೋಡಿದ್ದರೂ ಒಂದು ಸಲಕ್ಕೂ ಬೇಸರವಾಗಿಲ್ಲ. ಹೊಟ್ಟೆ ತುಂಬಾ ನಕ್ಕಿದ್ದೇವೆ, ನಮಗೆ ಕತೆ ಗೊತ್ತಿದ್ದರೂ ಕೆಲವು ಸನ್ನಿವೇಶಗಳಲ್ಲಿ ಸೀಟಿನ ತುದಿಯಲ್ಲಿ ಕೂತು ಕುತೂಹಲದಿಂದ ನೋಡಿದ್ದೇವೆ. ಹಾಗಾಗಿ, ಪ್ರೇಕ್ಷಕರಿಗೂ ಇದೇ ಅನುಭವ ನೀಡುವಲ್ಲಿ ನಮ್ಮ ಸಿನಿಮಾ ಯಶ್ವಸಿಯಾಗುವುದು ಎಂದು ನಂಬಿದ್ದೇವೆ’ ಎಂದು ಹೇಳಿಕೊಂಡಿದ್ದಾರೆ.

ರಾಜು ಜೇಮ್ಸ್ ಬಾಂಡ್ ಚಿತ್ರವು ಸುಮಾರು ಎರಡು ತಾಸು 16 ನಿಮಿಷಗಳ ಅವಧಿಯದ್ದಾಗಿದ್ದು, ಅದರಲ್ಲಿ ಸುಮಾರು ೪೦ ನಿಮಿಷಗಳು ಪ್ರೇಕ್ಷಕರು ನಗುವಿನ ಅಲೆಯಲ್ಲಿ ತೇಲಾಡಲಿದ್ದಾರಂತೆ. ಚಿತ್ರದ ನಾಲ್ಕು ಹಾಡುಗಳನ್ನು ಲಂಡನ್ ಮತ್ತು ಸುತ್ತಮುತ್ತಲಿನ ಊರುಗಳಲ್ಲಿ ಚಿತ್ರೀಕರಣವಾಗಿರುವುದು ವಿಶೇಷ.

ಈಗಾಗಲೇ ಚಿತ್ರದ ಸೆನ್ಸಾರ್ ಮುಗಿದಿದ್ದು, ಚಿತ್ರಕ್ಕೆ ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರತಂಡವು ಹೊಸ ಟೀಸರ್‍ ಬಿಡುಗಡೆ ಮೂಲಕ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಿದೆ.

ಆಂದೋಲನ ಡೆಸ್ಕ್

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

4 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

5 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

6 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

6 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

7 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

9 hours ago