ಮನರಂಜನೆ

‘ರಾಕ್ಷಸ’ನಿಗೆ ಸೋನಲ್ ಮೊಂಥೆರೋ ನಾಯಕಿ; ಶಿವರಾತ್ರಿಗೆ ಚಿತ್ರ ಬಿಡುಗಡೆ

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್‍ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.

ನಿರ್ದೇಶಕ ಲೋಹಿತ್‍ ನಾಯಕಿ ಪ್ರಧಾನ ಚಿತ್ರಗಳನ್ನು ಹೆಚ್ಚು ನಿರ್ದೇಶಿಸಿದವರು. ಈ ಹಿಂದೆ ಅವರು ನಿರ್ದೇಶನ ಮಾಡಿರುವ ‘ಮಮ್ಮಿ – ಸೇವ್‍ ಮೀ’ ಮತ್ತು ‘ದೇವಕಿ’ ಚಿತ್ರಗಳಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ರಾಕ್ಷಸ’ ಚಿತ್ರವನ್ನು ಮಾಡಿ ಮುಗಿಸಿರುವ ಲೋಹಿತ್‍, ಚಿತ್ರದಲ್ಲೊಂದು ಪ್ರಮುಖ ಪಾತ್ರವನ್ನು ಸೋನಲ್‍ಗೆ ಕೊಟ್ಟಿದ್ದಾರೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಫೆಬ್ರವರಿ 26ರಂದು ಬಿಡುಗಡೆಯಾಗುತ್ತಿರುವ ‘ರಾಕ್ಷಸ’ ಚಿತ್ರವು ಕನ್ನಡದ ಮೊಟ್ಟ ಮೊದಲ ಬಾರಿಗೆ ಟೈಮ್‍ ಲೂಪ್‍ ಹಾರರ್ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮುನ್ನ ಹಾರರ್‍ ಮತ್ತು ಟೈಮ್‍ ಲೂಪ್‍ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಈಗ ಅವೆರಡೂ ಜಾನರ್‍ಗಳನ್ನು ಸೇರಿಸಿ, ‘ರಾಕ್ಷಸ’ ಮಾಡಿದ್ದಾರೆ ಲೋಹಿತ್‍.

‘ರಾಕ್ಷಸ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸೋನಲ್ ಮೊಂಥೆರೋ ಜೊತೆಗೆ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಮುಂತಾದವರು ನಟಿಸಿದ್ದು, ಜೇಬಿನ್ ಪಿ. ಜೋಕಬ್ ಛಾಯಾಗ್ರಹಣ ಮಾಡಿದ್ದಾರೆ. ವರುಣ್ ಉನ್ನಿ ಸಂಗೀತ ಮತ್ತು ಅವಿನಾಶ್ ಬಸುತ್ಕರ್ ಹಿನ್ನಲೆ ಸಂಗೀತವಿದೆ. ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಪ್ರಜ್ವಲ್‍ ಅಭಿನಯದ ‘ಗಣ’ ಚಿತ್ರವು ಜನವರಿ 31ರಂದು ಬಿಡುಗಡೆಯಾಗುತ್ತಿದ್ದು, ಇದು ಸಹ ಒಂದು ಟೈಮ್‍ ಲೂಪ್‍ ಚಿತ್ರವಾಗಿದೆ. ಇದು ತೆಲುಗಿನಲ್ಲಿ 2021ರಲ್ಲಿ ಬಿಡುಗಡೆಯಾದ ‘ಪ್ಲೇ ಬ್ಯಾಕ್‍’ ಎಂಬ ಚಿತ್ರದ ರೀಮೇಕ್‍ ಆಗಿದ್ದು, ಮೂಲ ಚಿತ್ರವನ್ನು ನಿರ್ದೇಶಿಸಿದ್ದ ಹರಿಪ್ರಸಾದ್‍ ಜಕ್ಕ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

48 mins ago

ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ : ಮೇ 8ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.…

58 mins ago

ಮೈಸೂರಿನ ಹೊರವಲಯದಲ್ಲಿ ಹುಲಿ ಸಂಚಾರ : ಮುಂದುವರೆದ ಕಾರ್ಯಾಚರಣೆ

ಮೈಸೂರು : ಬೋಗಾದಿಯ ಗದ್ದಿಗೆ ರಸ್ತೆಯಲ್ಲಿರುವ ಜೆಟ್ಟಿಹುಂಡಿ ಗ್ರಾಮದ ತೋಟವೊಂದರಲ್ಲಿ ಹುಲಿ ಸಂಚರಿಸುತ್ತಿರುವ ಬಗ್ಗೆ ಮಂಗಳವಾರ ರೈತರೊಬ್ಬರು ನೀಡಿದ ಮಾಹಿತಿ…

1 hour ago

ನರೇಗಾ ವಿರೋಧಿ ಕೇಂದ್ರ ಸಚಿವರು, ಸಂಸದರು : ಸಚಿವ ಚಲುವರಾಯಸ್ವಾಮಿ ಕಿಡಿ

ಬೆಂಗಳೂರು : ಕರ್ನಾಟಕದಿಂದ ಚುನಾಯಿತರಾಗಿ ಕೇಂದ್ರದಲ್ಲಿ ಸಂಸದರಾಗಿ, ಮಂತ್ರಿಯಾಗಿರುವವರಿಗೆ ಕಿಂಚಿತ್ ರಾಜ್ಯದ ಜನರ ಬಗ್ಗೆ ಗೌರವ, ಕಾಳಜಿ ಇದ್ದರೆ ಮಹಾತ್ಮಗಾಂಧಿ…

2 hours ago

ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್‌ ಗೀಳು : ಡಿಜಿಟಲ್‌ ಲಾಕ್‌ ಪ್ರಯೋಗಕ್ಕೆ ಮುಂದಾದ ಸರ್ಕಾರ

ಬೆಂಗಳೂರು : ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಗೀಳು ಕಡಿಮೆ ಮಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ…

2 hours ago

ಎಸ್‌ಸಿಪಿ,ಟಿಎಸ್‌ಪಿ ಅನುದಾನ ಗ್ಯಾರಂಟಿಗೆ ಬಳಕೆ : ಕಾಂಗ್ರೆಸ್‌ನಲ್ಲೇ ಅಸಮಾಧಾನ

ಬೆಂಗಳೂರು : ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆ ಅನುದಾನವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುತ್ತಿದೆ…

2 hours ago