ಮನರಂಜನೆ

‘ರಾಕ್ಷಸ’ನಿಗೆ ಸೋನಲ್ ಮೊಂಥೆರೋ ನಾಯಕಿ; ಶಿವರಾತ್ರಿಗೆ ಚಿತ್ರ ಬಿಡುಗಡೆ

ಪ್ರಜ್ವಲ್ ದೇವರಾಜ್ ಅಭಿನಯದ ‘ರಾಕ್ಷಸ’ ಚಿತ್ರವು ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 26ಕ್ಕೆ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಇದುವರೆಗೂ ಚಿತ್ರತಂಡದವರು ಚಿತ್ರದ ನಾಯಕಿ ಯಾರು ಎಂಬ ವಿಷಯವನ್ನು ಬಿಟ್ಟುಕೊಟ್ಟಿರಲಿಲ್ಲ. ಇದೀಗ ಘೋಷಣೆಯಾಗಿದ್ದು, ಸೋನಲ್‍ ಮೊಂಥೆರೋ ಚಿತ್ರದ ನಾಯಕಿಯಾಗಿ ನಟಿಸಿದ್ದಾರೆ.

ನಿರ್ದೇಶಕ ಲೋಹಿತ್‍ ನಾಯಕಿ ಪ್ರಧಾನ ಚಿತ್ರಗಳನ್ನು ಹೆಚ್ಚು ನಿರ್ದೇಶಿಸಿದವರು. ಈ ಹಿಂದೆ ಅವರು ನಿರ್ದೇಶನ ಮಾಡಿರುವ ‘ಮಮ್ಮಿ – ಸೇವ್‍ ಮೀ’ ಮತ್ತು ‘ದೇವಕಿ’ ಚಿತ್ರಗಳಲ್ಲಿ ಪ್ರಿಯಾಂಕಾ ಉಪೇಂದ್ರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದೀಗ ‘ರಾಕ್ಷಸ’ ಚಿತ್ರವನ್ನು ಮಾಡಿ ಮುಗಿಸಿರುವ ಲೋಹಿತ್‍, ಚಿತ್ರದಲ್ಲೊಂದು ಪ್ರಮುಖ ಪಾತ್ರವನ್ನು ಸೋನಲ್‍ಗೆ ಕೊಟ್ಟಿದ್ದಾರೆ.

ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಫೆಬ್ರವರಿ 26ರಂದು ಬಿಡುಗಡೆಯಾಗುತ್ತಿರುವ ‘ರಾಕ್ಷಸ’ ಚಿತ್ರವು ಕನ್ನಡದ ಮೊಟ್ಟ ಮೊದಲ ಬಾರಿಗೆ ಟೈಮ್‍ ಲೂಪ್‍ ಹಾರರ್ ಚಿತ್ರವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದಕ್ಕೂ ಮುನ್ನ ಹಾರರ್‍ ಮತ್ತು ಟೈಮ್‍ ಲೂಪ್‍ ಚಿತ್ರಗಳು ಕನ್ನಡದಲ್ಲಿ ಬಂದಿವೆ. ಈಗ ಅವೆರಡೂ ಜಾನರ್‍ಗಳನ್ನು ಸೇರಿಸಿ, ‘ರಾಕ್ಷಸ’ ಮಾಡಿದ್ದಾರೆ ಲೋಹಿತ್‍.

‘ರಾಕ್ಷಸ’ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಹಾಗೂ ಸೋನಲ್ ಮೊಂಥೆರೋ ಜೊತೆಗೆ ಶೋಭರಾಜ್, ವತ್ಸಲಾ ಮೋಹನ್, ‘ಸಿದ್ಲಿಂಗು’ ಶ್ರೀಧರ್, ಆರ್ನ ರಾಥೋಡ್ ಮುಂತಾದವರು ನಟಿಸಿದ್ದು, ಜೇಬಿನ್ ಪಿ. ಜೋಕಬ್ ಛಾಯಾಗ್ರಹಣ ಮಾಡಿದ್ದಾರೆ. ವರುಣ್ ಉನ್ನಿ ಸಂಗೀತ ಮತ್ತು ಅವಿನಾಶ್ ಬಸುತ್ಕರ್ ಹಿನ್ನಲೆ ಸಂಗೀತವಿದೆ. ಶಾನ್ವಿ ಎಂಟರ್‌ಟೇನ್ಮೆಂಟ್ ಮೂಲಕ ದೀಪು ಬಿ.ಎಸ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.

ಪ್ರಜ್ವಲ್‍ ಅಭಿನಯದ ‘ಗಣ’ ಚಿತ್ರವು ಜನವರಿ 31ರಂದು ಬಿಡುಗಡೆಯಾಗುತ್ತಿದ್ದು, ಇದು ಸಹ ಒಂದು ಟೈಮ್‍ ಲೂಪ್‍ ಚಿತ್ರವಾಗಿದೆ. ಇದು ತೆಲುಗಿನಲ್ಲಿ 2021ರಲ್ಲಿ ಬಿಡುಗಡೆಯಾದ ‘ಪ್ಲೇ ಬ್ಯಾಕ್‍’ ಎಂಬ ಚಿತ್ರದ ರೀಮೇಕ್‍ ಆಗಿದ್ದು, ಮೂಲ ಚಿತ್ರವನ್ನು ನಿರ್ದೇಶಿಸಿದ್ದ ಹರಿಪ್ರಸಾದ್‍ ಜಕ್ಕ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ.

ಭೂಮಿಕಾ

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

50 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

56 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

1 hour ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

8 hours ago