ಕೆಲವು ದಿನಗಳ ಹಿಂದಷ್ಟೇ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ ‘ತಿಮ್ಮನ ಮೊಟ್ಟೆಗಳು’ ಚಿತ್ರ ಬಿಡುಗಡೆಯಾಗಿತ್ತು. ಈ ಚಿತ್ರಕ್ಕೆ ಪ್ರೇಕ್ಷಕರಿಂದ ಮೆಚ್ಚುಗೆಯೂ ವ್ಯಕ್ತವಾಗಿತ್ತು. ಆದರೆ, ಚಿತ್ರ ದೊಡ್ಡ ಸದ್ದು ಮಾಡಲಿಲ್ಲ. ಹೀಗಿರುವಾಗಲೇ, ಆ ಚಿತ್ರವನ್ನು ಶ್ರೀಕೃಷ್ಣ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದ ಆದರ್ಶ್ ಅಯ್ಯಂಗಾರ್, ರಕ್ಷಿತ್ ನಿರ್ದೇಶನದಲ್ಲಿ ಇನ್ನೊಂದು ಚಿತ್ರವನ್ನು ಸದ್ದಿಲ್ಲದೆ ನಿರ್ಮಿಸಿದ್ದಾರೆ. ಈ ಚಿತ್ರದ ಚಿತ್ರೀಕರಣ ಸದ್ದಿಲ್ಲದೆ ಮುಗಿದಿದ್ದು, ಇತ್ತೀಚೆಗೆ ಟೀಸರ್ ಸಹ ಬಿಡುಗಡೆಯಾಗಿದೆ.
ರಕ್ಷಿತ್ ನಿರ್ದೇಶನದ ಈ ಹಿಂದಿನ ಚಿತ್ರಗಳು ಒಂದಲ್ಲ ಒಂದು ಸಾಮಾಜಿಕ ಸಮಸ್ಯೆಗಳ ಸುತ್ತ ಸುತ್ತುತ್ತಿದ್ದವು. ಈ ಬಾರಿ, ಅವರು ‘ಮೋಡ, ಮಳೆ ಮತ್ತು ಶೈಲ’ಳ ಕಥೆಯನ್ನು ಹೇಳುವುದಕ್ಕೆ ಹೊರಟಿದ್ದಾರೆ. ಇದೊಂದು ಮಹಿಳಾ ಪ್ರಧಾನ ಚಿತ್ರವಾಗಿದ್ದು, ಮುಖ್ಯ ಪಾತ್ರದಲ್ಲಿ ಅಕ್ಷತ ಪಾಂಡವಪುರ ನಟಿಸಿದ್ದಾರೆ. ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೈತ್ರೇಯ, ಉತ್ಪಲ್ ಗೌಡ, ರಾಘು ರಾಮನಕೊಪ್ಪ, ಬಲರಾಜ್ ವಾಡಿ, ಅಶ್ವಿನ್ ಹಾಸನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಇದನ್ನು ಓದಿ : ‘ಕುಂಟೆಬಿಲ್ಲೆ’ ಆಡಲು ಬಂದ ಮೇಘಶ್ರೀ; ಸೆ. 26ಕ್ಕೆ ಚಿತ್ರ ಬಿಡುಗಡೆ
ಈ ಚಿತ್ರದ ಕುರಿತು ಮಾತನಾಡುವ ರಕ್ಷಿತ್, ‘ಸದ್ಯ ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿ ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿದೆ. ಆದರ್ಶ ಅಯ್ಯಂಗಾರ್ ಅವರಿಗೆ ಕಥೆ ಹೇಳಿದಾಗ ಅವರಿಗೆ ಇಷ್ಟವಾಗಿ, ಈ ಚಿತ್ರ ನಿರ್ಮಿಸುವುದಕ್ಕೆ ಮುಂದೆ ಬಂದಿದ್ದಾರೆ. ಈ ಚಿತ್ರವನ್ನು ಸಂಪೂರ್ಣ ಮಳೆಯಲ್ಲಿಯೇ ಮತ್ತು ಸಿಂಕ್ ಸೌಂಡ್ನಲ್ಲೇ ಚಿತ್ರೀಕರಣ ಮಾಡಲಾಗಿದೆ. ಈ ಮೊದಲಿನ ಮೂರು ಚಿತ್ರಗಳನ್ನು ವಿಷಯಗಳ ಮೇಲೆ ಮಾಡಿದ್ದೆ. ಈಗ ಶೈಲಳ ಕಥೆ ಹೇಳಲು ಹೊರಟಿದ್ದೇನೆ. ಇದೊಂದು ಡ್ರಾಮಾ ಥ್ರಿಲ್ಲರ್ ಶೈಲಿಯ ಚಿತ್ರ. ತೀರ್ಥಹಳ್ಳಿ, ಕುಂದಾಪುರ ಗಡಿಭಾಗಗಳ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ. ನಾನು 2012-13ರ ಕಾಲಘಟ್ಟದಲ್ಲಿ ನೋಡಿದ ಹಾಗೂ ಕೇಳಿದ ಒಂದಿಷ್ಟು ವಿಷಯ ಇಟ್ಟುಕೊಂಡು ಈ ಸಿನಿಮಾ ಮಾಡಿದ್ದೇನೆ’ ಎಂದು ಹೇಳಿದರು.
ಇದನ್ನು ಓದಿ : ಸಿನಿಪ್ರಿಯರಿಗೆ ಶಾಕ್: ಸಿನಿಮಾ ಟಿಕೆಟ್ ದರ 200ರೂ ನಿಗದಿಗೆ ಹೈಕೋರ್ಟ್ ತಡೆಯಾಜ್ಞೆ
ನಂತರ ಚಿತ್ರದ ಪ್ರಮುಖ ಪಾತ್ರಧಾರಿ ಅಕ್ಷತ ಪಾಂಡವಪುರ ಮಾತನಾಡಿ, ‘ನಾನಿಲ್ಲಿ ಶೈಲಳ ಪಾತ್ರ ಮಾಡಿದ್ದೇನೆ. ಇಂತಹ ಸಿನಿಮಾ ನನ್ನ ವೃತ್ತಿಜೀವನದಲ್ಲಿ ಸಿಗುತ್ತದೋ ಇಲ್ಲವೋ ಗೊತ್ತಿಲ್ಲ. ಇದು ನನ್ನ ಪಾಲಿಗೆ ವಿಶೇಷವಾದ ಚಿತ್ರ. ಇದರಲ್ಲಿ ನಿರ್ದೇಶಕರು ಮಲೆನಾಡಿನ ಒಂಟಿ ಹೆಣ್ಣಿನ ಕಥೆ ಹೇಳ ಹೊರಟಿದ್ದಾರೆ. ಇದರಲ್ಲಿ ಮಳೆ ಕೂಡ ಒಂದು ಪ್ರಮುಖ ಪಾತ್ರವಾಗಿ ತೋರಿಸಲಾಗಿದೆ. ನಾನು ಸಿನಿಮಾ ನೋಡಲು ಕಾತುರದಿಂದ ಕಾಯುತ್ತಿದ್ದೇನೆ’ ಎಂದರು.
‘ಮಳೆ, ಮೋಡ ಮತ್ತು ಶೈಲು’ ಚಿತ್ರಕ್ಕೆ ಸಾಗರ್ ಎಚ್.ಜಿ ಛಾಯಾಗ್ರಹಣ ಮತ್ತು ಅಕ್ಷಯ್ ಪಿ. ರಾವ್ ಅವರ ಸಂಕಲನವಿದೆ.
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…