ಮನರಂಜನೆ

ಅಮೇಜಾನ್ ಪ್ರೈಮ್‍ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್‍ ಪ್ರೈಮ್‍ನಲ್ಲಿ ಸ್ಟ್ರೀಮ್‍ ಆಗುತ್ತಿದೆ.

ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಆ ಪೈಕಿ ‘ಮಿಥ್ಯ’ ಸಹ ಒಂದು. ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸಿನ ಕಥಾಹಂದರ ಹೊಂದಿರುವ ಈ ಚಿತ್ರ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡಿತು. ಆದರೆ, ಚಿತ್ರ ಬಿಡುಗಡೆಯಾದಾಗ ಹೆಚ್ಚು ಸುದ್ದಿಯಾಗಲಿಲ್ಲ. ಈಗ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ.

ಈ ಹಿಂದೆ ‘ಏಕಂ’ ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್, ‘ಮಿಥ್ಯ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದ್ದ, ಮಾಸ್ಟರ್ ಅತೀಶ್ ಎಸ್, ಶೆಟ್ಟಿ, ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಚಿತ್ರದಲ್ಲಿ ನಟಿಸಿದ್ದಾರೆ.

‘ಮಿಥ್ಯ’ ಚಿತ್ರಕ್ಕೆ ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತವಿದೆ.

ಇತ್ತೀಚಿನ ದಿನಗಳಲ್ಲಿ ಅಮೇಜಾನ್‍ ಪ್ರೈಮ್‍ನಲ್ಲಿ ‘ಫಾರೆಸ್ಟ್’, ‘ಛೂ ಮಂತರ್‍’, ‘ನೋಡಿದವರು ಏನಂತಾರೆ’, ‘ಮರ್ಯಾದೆ ಪ್ರಶ್ನೆ’, ‘ರಾಯಲ್‍’, ‘ಲಾಫಿಂಗ್‍ ಬುದ್ಧ’, ‘ತಾಯಿ ಕಸ್ತೂರ್‍ ಗಾಂಧು’ ಮುಂತಾದ ಚಿತ್ರಗಳು ಬಿಡುಗಡೆಯಾಗಿದ್ದು, ಈಗ ಆ ಸಾಲಿಗೆ ‘ಮಿಥ್ಯ’ ಸಹ ಸೇರಿದೆ.

ಆಂದೋಲನ ಡೆಸ್ಕ್

Recent Posts

ಕೊಡಗು ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಮಳೆಯ ವಿವರ

ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…

19 mins ago

ಹಾರಂಗಿ ಜಲಾಶಯದ ಇಂದಿನ ನೀರಿನ ಮಟ್ಟ

ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…

39 mins ago

ತಮಿಳುನಾಡಿಗೆ ನಿತ್ಯ 9 ಸಾವಿರ ಕ್ಯೂಸೆಕ್ ನೀರು ಹರಿಸಿ – CWRC ಶಿಫಾರಸು ಎತ್ತಿಹಿಡಿದ CWMA

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…

43 mins ago

ಓದುಗರ ಪತ್ರ: ಭವಿಷ್ಯದ ಬೆಳಕಾಗಲಿ!

ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…

3 hours ago

ಓದುಗರ ಪತ್ರ: ಓದುಗರ ಪತ್ರ ಚಾಮುಂಡಿಬೆಟ್ಟ: ನೋ-ಫ್ಲೈಝೋನ್ ಆಗಲಿ

ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…

3 hours ago

ಓದುಗರ ಪತ್ರ: ಪ್ರೇಕ್ಷಕರ ಆಸಕ್ತಿಗೆ ತಕ್ಕಂತೆ ಕಾರ್ಯಕ್ರಮ ಆಯೋಜಿಸಿ

ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…

3 hours ago