ಮನರಂಜನೆ

ಅಮೇಜಾನ್ ಪ್ರೈಮ್‍ನಲ್ಲಿ ರಕ್ಷಿತ್ ಶೆಟ್ಟಿ ನಿರ್ಮಾಣದ ‘ಮಿಥ್ಯ’

ರಕ್ಷಿತ್‍ ಶೆಟ್ಟಿ ನಿರ್ಮಾಣದ ‘ಮಿಥ್ಯ’ ಚಿತ್ರವು ಮಾರ್ಚ್ 07ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಚಿತ್ರದ ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬಂದಿದ್ದರೂ, ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈಗ ಈ ಚಿತ್ರವು ಅಮೇಜಾನ್‍ ಪ್ರೈಮ್‍ನಲ್ಲಿ ಸ್ಟ್ರೀಮ್‍ ಆಗುತ್ತಿದೆ.

ರಕ್ಷಿತ್ ಶೆಟ್ಟಿ ಪರಂವಃ ಪಿಕ್ಚರ್ಸ್ ಮೂಲಕ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ, ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುತ್ತಾ ಬಂದಿದ್ದಾರೆ. ಆ ಪೈಕಿ ‘ಮಿಥ್ಯ’ ಸಹ ಒಂದು. ಹೆತ್ತವರನ್ನು ಕಳೆದುಕೊಂಡ ಮಿಥುನ್ ಎಂಬ ಹುಡುಗನ ಹೊಸ ಕನಸಿನ ಕಥಾಹಂದರ ಹೊಂದಿರುವ ಈ ಚಿತ್ರ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೂ ಪ್ರದರ್ಶನಗೊಂಡಿತು. ಆದರೆ, ಚಿತ್ರ ಬಿಡುಗಡೆಯಾದಾಗ ಹೆಚ್ಚು ಸುದ್ದಿಯಾಗಲಿಲ್ಲ. ಈಗ ಈ ಚಿತ್ರ ಅಮೇಜಾನ್ ಪ್ರೈಮ್ ನಲ್ಲಿ ನೋಡಲು ಲಭ್ಯವಿದೆ.

ಈ ಹಿಂದೆ ‘ಏಕಂ’ ಎಂಬ ವೆಬ್ ಸಿರೀಸ್ ಸೇರಿದಂತೆ ಅನೇಕ ಕಿರುಚಿತ್ರಗಳನ್ನು ನಿರ್ದೇಶಿಸಿರುವ ಸುಮಂತ್ ಭಟ್, ‘ಮಿಥ್ಯ’ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮೂರು ಮುಖ್ಯಪಾತ್ರಗಳಿದ್ದ, ಮಾಸ್ಟರ್ ಅತೀಶ್ ಎಸ್, ಶೆಟ್ಟಿ, ಮಿಥುನ್ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ತುಮ್ಮಿನಾಡು, ರೂಪ ವರ್ಕಾಡ್ ಸಹ ಚಿತ್ರದಲ್ಲಿ ನಟಿಸಿದ್ದಾರೆ.

‘ಮಿಥ್ಯ’ ಚಿತ್ರಕ್ಕೆ ಉದಿತ್ ಕುರಾನ ಛಾಯಾಗ್ರಹಣ, ಭುವನೇಶ್ ಮಣಿವಣನ್ ಸಂಕಲನ ಹಾಗೂ ಮಿಥುನ್ ಮುಕುಂದನ್ ಸಂಗೀತವಿದೆ.

ಇತ್ತೀಚಿನ ದಿನಗಳಲ್ಲಿ ಅಮೇಜಾನ್‍ ಪ್ರೈಮ್‍ನಲ್ಲಿ ‘ಫಾರೆಸ್ಟ್’, ‘ಛೂ ಮಂತರ್‍’, ‘ನೋಡಿದವರು ಏನಂತಾರೆ’, ‘ಮರ್ಯಾದೆ ಪ್ರಶ್ನೆ’, ‘ರಾಯಲ್‍’, ‘ಲಾಫಿಂಗ್‍ ಬುದ್ಧ’, ‘ತಾಯಿ ಕಸ್ತೂರ್‍ ಗಾಂಧು’ ಮುಂತಾದ ಚಿತ್ರಗಳು ಬಿಡುಗಡೆಯಾಗಿದ್ದು, ಈಗ ಆ ಸಾಲಿಗೆ ‘ಮಿಥ್ಯ’ ಸಹ ಸೇರಿದೆ.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

25 mins ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

1 hour ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

2 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

3 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

3 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

5 hours ago