ram charan
ರಾಮ್ ಚರಣ್ ತೇಜ ಅಭಿನಯದ ‘ಪೆದ್ದಿ’ ಚಿತ್ರವು 2026ರ ಮಾರ್ಚ್.27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಚಿತ್ರದ ಹಾಡೊಂದಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ಸಾಗುತ್ತಿದೆ.
ಎ.ಆರ್.ರೆಹಮಾನ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ರಾಮ್ ಚರಣ್ ತೇಜ ಜೊತೆಗೆ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಹೆಜ್ಜೆ ಹಾಕುತ್ತಿದ್ದು, ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಈ ಹಾಡಿನ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಒಂದು ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರಂತೆ. ಮೂಲಗಳ ಪ್ರಕಾರ, ಶಿವರಾಜಕುಮಾರ್ ಈ ಚಿತ್ರದಲ್ಲಿ ರಾಮ್ ಚರಣ್ ತೇಜ ಅವರ ಸಹೋದರನ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಇತ್ತೀಚೆಗೆ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ.
ಈ ಹಿಂದೆ ‘ಉಪ್ಪೆನ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನ, ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ಹಾಗೂ ರತ್ನವೇಲು ಛಾಯಾಗ್ರಹಣವಿದೆ.
‘ಪೆದ್ದಿ’ ಚಿತ್ರದಲ್ಲಿ ರಾಮ್ ಚರಣ್ಗೆ ಜೋಡಿಯಾಗಿ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಅಭಿನಯಿಸುತ್ತಿದ್ದು, ಜೊತೆಗೆ ಶಿವರಾಜಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.
‘ಪೆದ್ದಿ’ ಚಿತ್ರವು ಮುಂದಿನ ವರ್ಷ ರಾಮ ನವಮಿಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…