ಮನರಂಜನೆ

ಮೈಸೂರಿನಲ್ಲಿ ಸಾವಿರ ಡ್ಯಾನ್ಸರ್ಸ್ ಜೊತೆ ಹೆಜ್ಜೆ ಹಾಕಿದ ರಾಮ್‍ ಚರಣ್‍ ತೇಜ

ರಾಮ್ ಚರಣ್ ತೇಜ ಅಭಿನಯದ ‘ಪೆದ್ದಿ’ ಚಿತ್ರವು 2026ರ ಮಾರ್ಚ್.27ರಂದು ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ಚಿತ್ರದ ಚಿತ್ರೀಕರಣ ಭರದಿಂದ ಸಾಗಿದ್ದು, ಈ ಚಿತ್ರದ ಹಾಡೊಂದಕ್ಕೆ ಮೈಸೂರಿನಲ್ಲಿ ಚಿತ್ರೀಕರಣ ಸಾಗುತ್ತಿದೆ.

ಎ.ಆರ್.ರೆಹಮಾನ್‍ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅದ್ಧೂರಿ ಸೆಟ್ ಹಾಕಿ ಚಿತ್ರೀಕರಣ ನಡೆಸಲಾಗಿದೆ. ರಾಮ್‍ ಚರಣ್‍ ತೇಜ ಜೊತೆಗೆ ಸಾವಿರಕ್ಕೂ ಹೆಚ್ಚು ನೃತ್ಯಗಾರರು ಹೆಜ್ಜೆ ಹಾಕುತ್ತಿದ್ದು, ಖ್ಯಾತ ನೃತ್ಯ ನಿರ್ದೇಶಕ ಜಾನಿ ಮಾಸ್ಟರ್ ಈ ಹಾಡಿನ ನೃತ್ಯ ನಿರ್ದೇಶನ ಮಾಡುತ್ತಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ಶಿವರಾಜಕುಮಾರ್ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಈಗಾಗಲೇ ಒಂದು ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದಾರಂತೆ. ಮೂಲಗಳ ಪ್ರಕಾರ, ಶಿವರಾಜಕುಮಾರ್ ಈ ಚಿತ್ರದಲ್ಲಿ ರಾಮ್‍ ಚರಣ್‍ ತೇಜ ಅವರ ಸಹೋದರನ ಪಾತ್ರದಲ್ಲಿ ನಟಿಸುತ್ತಿದ್ದಾರಂತೆ. ಇತ್ತೀಚೆಗೆ, ಶಿವರಾಜಕುಮಾರ್ ಹುಟ್ಟುಹಬ್ಬದ ಸಂದರ್ಭದಲ್ಲಿ ಶಿವರಾಜಕುಮಾರ್ ಅವರ ಫಸ್ಟ್ ಲುಕ್‍ ಪೋಸ್ಟರ್ ಬಿಡುಗಡೆಯಾಗಿದೆ.

ಈ ಹಿಂದೆ ‘ಉಪ್ಪೆನ’ ಚಿತ್ರವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನ, ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡುತ್ತಿದ್ದಾರೆ. ಮೈತ್ರಿ ಮೂವೀ ಮೇಕರ್ಸ್, ಸುಕುಮಾರ್ ರೈಟಿಂಗ್ ಹಾಗೂ ವೃದ್ಧಿ ಸಿನಿಮಾಸ್ ನಿರ್ಮಾಣದಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ಚಿತ್ರಕ್ಕೆ ಎ.ಆರ್. ರೆಹಮಾನ್ ಸಂಗೀತ ಹಾಗೂ ರತ್ನವೇಲು ಛಾಯಾಗ್ರಹಣವಿದೆ.

‘ಪೆದ್ದಿ’ ಚಿತ್ರದಲ್ಲಿ ರಾಮ್‍ ಚರಣ್‍ಗೆ ಜೋಡಿಯಾಗಿ ಶ್ರೀದೇವಿ ಮಗಳು ಜಾಹ್ನವಿ ಕಪೂರ್ ಅಭಿನಯಿಸುತ್ತಿದ್ದು, ಜೊತೆಗೆ ಶಿವರಾಜಕುಮಾರ್, ಜಗಪತಿ ಬಾಬು, ದಿವ್ಯೆಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

‘ಪೆದ್ದಿ’ ಚಿತ್ರವು ಮುಂದಿನ ವರ್ಷ ರಾಮ ನವಮಿಯ ಸಂದರ್ಭದಲ್ಲಿ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ.

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

9 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

10 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

11 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

12 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

12 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

13 hours ago