Categories: ಮನರಂಜನೆ

ಮೈಸೂರಿನಿಂದಲೇ ಪ್ರಾರಂಭವಾದ ನಟ ರಾಮ್‌ ಚರಣ್‌ ಸಿನಿಮಾ : ಚಾಮುಂಡಿ ದರ್ಶನ ಪಡೆದ ನಿರ್ದೇಶಕ

ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇಂದು ನನ್ನ ಬದುಕಿನಲ್ಲಿಯೇ ತುಂಬಾ ಮಹತ್ವದ ದಿನವಾಗಿದ್ದು, ಹಲವು ನಿರೀಕ್ಷೆಯಿಂದ ಕಾಯುತ್ತಿರುವ ದಿನವಾಗಿದೆ. ಮೈಸೂರಿನ ತಾಯಿ ಚಾಮುಂಡೇಶ್ವರಿಯ ಆರ್ಶೀವಾದದೊಂದಿಗೆ ಈ ದಿನವನ್ನು ಆರಂಭಿಸುತ್ತಿದ್ದೇನೆ. ಜೊತೆಗೆ ನಿಮ್ಮೆಲ್ಲರ ಆರ್ಶೀವಾದದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಇನ್ನೂ ಬುಚ್ಚಿಬಾಬು ಸನಾ ಅವರ, ಈ ಪೋಸ್ಟ್‌ಗೆ ಮೆಗಾ ಕುಟುಂಬದ ನಟ ಪವನ್‌ ತೇಜ್‌ ಪ್ರತಿಕ್ರಿಯೆ ನೀಡಿದ್ದು, ಈ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದೇವೆ. ಬೊಂಬಾಟ್‌ ಆಗಿ ಮಾಡು ಬುಚ್ಚಿಮಾಮ ಎಂದು ಹೇಳಿದ್ದಾರೆ.

ಸಿನಿಮಾದ ವಿಶೇಷತೆ ಏನು?
ತೆಲುಗು ನಟ ರಾಮ್‌ ಚರಣ್‌ ತೇಜ ಹಾಗೂ ಬಾಲಿವುಡ್‌ ನಟಿ ಜಾನ್ಹವಿ ಕಪೂರ್‌ ನಟಿಸಲಿರುವ ಹೊಸ ಸಿನಿಮಾವನ್ನು ಬುಚ್ಚಿಬಾಬು ಸನಾ ಅವರು ನಿರ್ದೇಶಿಸಲಿದ್ದು, ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಸಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿಯೇ ಪ್ರಾರಂಭಗೊಂಡಿದ್ದು, ಸುಮಾರು ಎರಡು ವಾರಗಳ ಕಾಲ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ಸಿನಿಮಾವನ್ನು ವೃದ್ಧಿ ಸಿನಿಮಾ ಪ್ರೊಡಕ್ಷನ್‌ ಹೌಸ್‌ ವತಿಯಿಂದ ನಿರ್ಮಾಣ ಮಾಡಲಾಗುತ್ತಿದ್ದು, ರಾಮ್‌ ಚರಣ್‌ ತೇಜ ಅವರ 16ನೇ ಸಿನಿಮಾವಾಗಿದೆ. ಅಲ್ಲದೇ ಸಿನಿಮಾಕ್ಕೆ ಎ.ಆರ್‌.ರೆಹಮಾನ್‌ ಸಂಗೀತ ನಿರ್ದೇಶನ ಮಾಡಲಿದ್ದು, ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ರೈಲು ಟಿಕೆಟ್ ರದ್ದತಿ ಹೊಸ ನಿಯಮದ ಬಗ್ಗೆ ಅರಿವಿರಲಿ

ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ…

6 mins ago

ಓದುಗರ ಪತ್ರ: ಅಂಚೆ ಕಚೇರಿಯಲ್ಲಿ ಹೆಚ್ಚುವರಿ ಕೌಂಟರ್ ತೆರೆಯಿರಿ

ಮೈಸೂರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಕೌಂಟರ್‌ಗಳ ಸಂಖ್ಯೆ ಕಡಿಮೆ ಇರುವುದರಿಂದ ನಿಧಾನಗತಿಯಲ್ಲಿ ಕೆಲಸ ಸಾಗುತ್ತಿದೆ. ಹಿರಿಯ…

8 mins ago

ಓದುಗರ ಪತ್ರ: ಇರುವುದರಲ್ಲೇ ತೃಪ್ತಿ ಕಾಣಬೇಕು

ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ! ಜನಪ್ರಿಯ ಕವಿ ಗೋಪಾಲಕೃಷ್ಣ ಅಡಿಗರ ಕವನದ ಈ ಸಾಲು ಇಂದಿನ ಕಾಲಮಾನದ ಜನಮಾನಸಕ್ಕೆ…

14 mins ago

ಹಸಿರುಕ್ರಾಂತಿ ಹರಿಕಾರ ಡಾ.ಬಾಬು ಜಗಜೀವನರಾಮ್

ಎಚ್.ಹಾಲಪ್ಪ ಸಮಾನತೆ ಇಲ್ಲದೆ ಪ್ರಜಾಪ್ರಭುತ್ವ ಅಪೂರ್ಣ ಎಂದು ನಂಬಿದ್ದ ತಮ್ಮ ಕಾರ್ಯಪ್ರವೃತ್ತಿಯಿಂದ ಸಮಾಜದಲ್ಲಿ ಸಮಾನತೆಯನ್ನು ಜೀವಂತಗೊಳಿಸಿದ ದೇಶದಾದ್ಯಂತ ಬಾಬೂಜಿ ಎಂದೇ…

3 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕರ್ನಾಟಕ, ಮಹಾರಾಷ್ಟ್ರದಲ್ಲಿ ಮತ್ತೆ ಹಿಂದಿ ವಿವಾದ

ಹಿಂದಿ ಭಾಷೆಯ ಪ್ರಶ್ನೆ ಮತ್ತೆ ವಿವಾದವನ್ನು ಉಂಟು ಮಾಡಿದೆ. ತನ್ನ ಮಾತೃ ಭಾಷೆಯಲ್ಲದ ಮತ್ತು ಉತ್ತರ ಭಾರತದ ರಾಜ್ಯಗಳ ಮಾತೃ…

3 hours ago

ಕಾಫಿ ಉದ್ಯಮದ ಮೇಲೆ ಮಧ್ಯಪ್ರಾಚ್ಯ ಯುದ್ಧದ ಎಫೆಕ್..!

ನವೀನ್ ಡಿಸೋಜ ಶಿಪ್‌ಮೆಂಟ್ ವಿಳಂಬ, ಕಂಟೇನರ್ ಕೊರತೆ, ಹಡಗುಗಳ ಅಭಾವ, ಇಂಧನ ಅನಿಶ್ಚಿತತೆ ಕಾಫಿ ಉತ್ಪಾದನಾ ವಲಯದಲ್ಲಿ ಗೊಂದಲದ ವಾತಾವರಣ …

3 hours ago