Categories: ಮನರಂಜನೆ

ಮೈಸೂರಿನಿಂದಲೇ ಪ್ರಾರಂಭವಾದ ನಟ ರಾಮ್‌ ಚರಣ್‌ ಸಿನಿಮಾ : ಚಾಮುಂಡಿ ದರ್ಶನ ಪಡೆದ ನಿರ್ದೇಶಕ

ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇಂದು ನನ್ನ ಬದುಕಿನಲ್ಲಿಯೇ ತುಂಬಾ ಮಹತ್ವದ ದಿನವಾಗಿದ್ದು, ಹಲವು ನಿರೀಕ್ಷೆಯಿಂದ ಕಾಯುತ್ತಿರುವ ದಿನವಾಗಿದೆ. ಮೈಸೂರಿನ ತಾಯಿ ಚಾಮುಂಡೇಶ್ವರಿಯ ಆರ್ಶೀವಾದದೊಂದಿಗೆ ಈ ದಿನವನ್ನು ಆರಂಭಿಸುತ್ತಿದ್ದೇನೆ. ಜೊತೆಗೆ ನಿಮ್ಮೆಲ್ಲರ ಆರ್ಶೀವಾದದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಇನ್ನೂ ಬುಚ್ಚಿಬಾಬು ಸನಾ ಅವರ, ಈ ಪೋಸ್ಟ್‌ಗೆ ಮೆಗಾ ಕುಟುಂಬದ ನಟ ಪವನ್‌ ತೇಜ್‌ ಪ್ರತಿಕ್ರಿಯೆ ನೀಡಿದ್ದು, ಈ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದೇವೆ. ಬೊಂಬಾಟ್‌ ಆಗಿ ಮಾಡು ಬುಚ್ಚಿಮಾಮ ಎಂದು ಹೇಳಿದ್ದಾರೆ.

ಸಿನಿಮಾದ ವಿಶೇಷತೆ ಏನು?
ತೆಲುಗು ನಟ ರಾಮ್‌ ಚರಣ್‌ ತೇಜ ಹಾಗೂ ಬಾಲಿವುಡ್‌ ನಟಿ ಜಾನ್ಹವಿ ಕಪೂರ್‌ ನಟಿಸಲಿರುವ ಹೊಸ ಸಿನಿಮಾವನ್ನು ಬುಚ್ಚಿಬಾಬು ಸನಾ ಅವರು ನಿರ್ದೇಶಿಸಲಿದ್ದು, ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಸಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿಯೇ ಪ್ರಾರಂಭಗೊಂಡಿದ್ದು, ಸುಮಾರು ಎರಡು ವಾರಗಳ ಕಾಲ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ಸಿನಿಮಾವನ್ನು ವೃದ್ಧಿ ಸಿನಿಮಾ ಪ್ರೊಡಕ್ಷನ್‌ ಹೌಸ್‌ ವತಿಯಿಂದ ನಿರ್ಮಾಣ ಮಾಡಲಾಗುತ್ತಿದ್ದು, ರಾಮ್‌ ಚರಣ್‌ ತೇಜ ಅವರ 16ನೇ ಸಿನಿಮಾವಾಗಿದೆ. ಅಲ್ಲದೇ ಸಿನಿಮಾಕ್ಕೆ ಎ.ಆರ್‌.ರೆಹಮಾನ್‌ ಸಂಗೀತ ನಿರ್ದೇಶನ ಮಾಡಲಿದ್ದು, ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಅರ್ಚನ ಎಸ್‌ ಎಸ್

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

3 hours ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

5 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

7 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

7 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

9 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

9 hours ago