Categories: ಮನರಂಜನೆ

ಮೈಸೂರಿನಿಂದಲೇ ಪ್ರಾರಂಭವಾದ ನಟ ರಾಮ್‌ ಚರಣ್‌ ಸಿನಿಮಾ : ಚಾಮುಂಡಿ ದರ್ಶನ ಪಡೆದ ನಿರ್ದೇಶಕ

ಮೈಸೂರು: ತೆಲುಗು ನಿರ್ದೇಶಕ ಬುಚ್ಚಿಬಾಬು ಸನಾ ಅವರು ತಮ್ಮ ಹೊಸ ಸಿನಿಮಾದ ಚಿತ್ರಕತೆಯನ್ನು ಮೈಸೂರಿನ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ಪೂಜೆ ಮಾಡಿಸಿದ್ದು, ದೇವಸ್ಥಾನದ ಆವರಣದಲ್ಲಿ ಚಿತ್ರಕಥೆ ಹಿಡಿದು ಫೋಟೋ ಕ್ಲಿಕ್ಕಿಸಿಕೊಂಡಿದ್ದಾರೆ.

ಈ ಕುರಿತು ಇಂದು (ನ.23) ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, ಇಂದು ನನ್ನ ಬದುಕಿನಲ್ಲಿಯೇ ತುಂಬಾ ಮಹತ್ವದ ದಿನವಾಗಿದ್ದು, ಹಲವು ನಿರೀಕ್ಷೆಯಿಂದ ಕಾಯುತ್ತಿರುವ ದಿನವಾಗಿದೆ. ಮೈಸೂರಿನ ತಾಯಿ ಚಾಮುಂಡೇಶ್ವರಿಯ ಆರ್ಶೀವಾದದೊಂದಿಗೆ ಈ ದಿನವನ್ನು ಆರಂಭಿಸುತ್ತಿದ್ದೇನೆ. ಜೊತೆಗೆ ನಿಮ್ಮೆಲ್ಲರ ಆರ್ಶೀವಾದದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಇನ್ನೂ ಬುಚ್ಚಿಬಾಬು ಸನಾ ಅವರ, ಈ ಪೋಸ್ಟ್‌ಗೆ ಮೆಗಾ ಕುಟುಂಬದ ನಟ ಪವನ್‌ ತೇಜ್‌ ಪ್ರತಿಕ್ರಿಯೆ ನೀಡಿದ್ದು, ಈ ಸಿನಿಮಾಕ್ಕಾಗಿ ಎದುರು ನೋಡುತ್ತಿದ್ದೇವೆ. ಬೊಂಬಾಟ್‌ ಆಗಿ ಮಾಡು ಬುಚ್ಚಿಮಾಮ ಎಂದು ಹೇಳಿದ್ದಾರೆ.

ಸಿನಿಮಾದ ವಿಶೇಷತೆ ಏನು?
ತೆಲುಗು ನಟ ರಾಮ್‌ ಚರಣ್‌ ತೇಜ ಹಾಗೂ ಬಾಲಿವುಡ್‌ ನಟಿ ಜಾನ್ಹವಿ ಕಪೂರ್‌ ನಟಿಸಲಿರುವ ಹೊಸ ಸಿನಿಮಾವನ್ನು ಬುಚ್ಚಿಬಾಬು ಸನಾ ಅವರು ನಿರ್ದೇಶಿಸಲಿದ್ದು, ಸ್ಯಾಂಡಲ್‌ವುಡ್‌ ನಟ ಶಿವರಾಜ್‌ ಕುಮಾರ್‌ ಸಹ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹೀಗಾಗಿ ಈ ಸಿನಿಮಾದ ಚಿತ್ರೀಕರಣ ಮೈಸೂರಿನಲ್ಲಿಯೇ ಪ್ರಾರಂಭಗೊಂಡಿದ್ದು, ಸುಮಾರು ಎರಡು ವಾರಗಳ ಕಾಲ ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಯಲಿದೆ ಎಂದು ತಿಳಿದು ಬಂದಿದೆ.

ಈ ಸಿನಿಮಾವನ್ನು ವೃದ್ಧಿ ಸಿನಿಮಾ ಪ್ರೊಡಕ್ಷನ್‌ ಹೌಸ್‌ ವತಿಯಿಂದ ನಿರ್ಮಾಣ ಮಾಡಲಾಗುತ್ತಿದ್ದು, ರಾಮ್‌ ಚರಣ್‌ ತೇಜ ಅವರ 16ನೇ ಸಿನಿಮಾವಾಗಿದೆ. ಅಲ್ಲದೇ ಸಿನಿಮಾಕ್ಕೆ ಎ.ಆರ್‌.ರೆಹಮಾನ್‌ ಸಂಗೀತ ನಿರ್ದೇಶನ ಮಾಡಲಿದ್ದು, ಈ ಚಿತ್ರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ.

ಅರ್ಚನ ಎಸ್‌ ಎಸ್

Recent Posts

ಮಂಜಿನ ನಡುವೆ ಕೇಸರಿ ರೈಲು; ಕಾಗಿನೆರೆ ದೃಶ್ಯ ವೈರಲ್

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಧಾನಿ ಮೋದಿ, ರೈಲ್ವೆ  ಸಚಿವ ಅಶ್ವಿನಿ ವೈಷ್ಣವ್ ಗಮನ ಸೆಳೆದ ಪಶ್ಚಿಮಘಟ್ಟದ ಪ್ರಕೃತಿ ಸೌಂದರ್ಯ ಸೋಮವಾರಪೇಟೆ: ಪಶ್ಚಿಮಘಟ್ಟದ…

3 mins ago

ಕೋಟೆ ಟಿಎಪಿಸಿಎಂಎಸ್ ಚುನಾವಣೆಗೆ ಕೊನೆಗೂ ದಿನಾಂಕ ನಿಗದಿ

ಮಂಜು ಕೋಟೆ ಗುರುವಾರ ಚುನಾವಣೆ: ಅಧಿಕಾರ ಹಿಡಿಯಲು ಪಕ್ಷಗಳ ಪೈಪೋಟಿ; ಜನರಲ್ಲಿ ಕುತೂಹಲ ಹೆಚ್.ಡಿ.ಕೋಟೆ: ಬಿಜೆಪಿ-ಜಾ.ದಳ ಮೈತ್ರಿ ಮತ್ತು ಕಾಂಗ್ರೆಸ್…

9 mins ago

ಅರೇಪುರ ಗ್ರಾಮಕ್ಕಿಲ್ಲ ಸರ್ಕಾರಿ ಬಸ್ ಸೌಲಭ್ಯ

ಮಹೇಂದ್ರ ಹಸಗೂಲಿ ಗ್ರಾಮಸ್ಥರಿಗೆ ನಿತ್ಯ ಎರಡು ಕಿ.ಮೀ. ಬಸ್‌ಗಾಗಿ ನಡೆದುಕೊಂಡು ಹೋಗಬೇಕಾದ ದುಸ್ಥಿತಿ ಗುಂಡ್ಲುಪೇಟೆ: ತಾಲ್ಲೂಕಿನ ಮೈಸೂರು-ಊಟಿ ಹೆದ್ದಾರಿಯ ಮಾರ್ಗದಲ್ಲಿರುವ…

16 mins ago

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

14 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

14 hours ago