ಸತ್ಯಪ್ರಕಾಶ್ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ಬಿಡುಗಡೆ ಮಾಡಿದೆ.
ಇದು ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮತ್ತು ‘ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರಗಳ ನಂತರ ಸತ್ಯ ಪ್ರಕಾಶ್, ಈ ಚಿತ್ರದಲ್ಲಿ ಗಂಭೀರ ವಿಷಯವನ್ನು ಹಾಸ್ಯದ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ. ಕೆಲವೇ ಪಾತ್ರಗಳ ಸುತ್ತ ಸುತ್ತುವ ಈ ಚಿತ್ರಕ್ಕಾಗಿ ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.
ಈ ಚಿತ್ರದಲ್ಲಿ ಸತ್ಯಪ್ರಕಾಶ್ ಆಟೋ ಡ್ರೈವರ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯ ಪ್ರಕಾಶ್. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ.
ವಿಶೇಷವೆಂದರೆ, ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ ಹೊಸ ಆಟೋ ಪರಿಚಯಿಸಲಾಗಿದೆ. ಈ ಆಟೋದ ವಿಶೇಷತೆ ಎಂದರೆ, ಆಂಬುಲೆನ್ಸ್ನಲ್ಲಿರುವಂತೆ ಎಲ್ಲ ಸೌಲಭ್ಯಗಳಿವೆ. ಈ ಆಟೋವನ್ನು ಚಿತ್ರದಲ್ಲಿ ಒಬ್ಬ ಕಲಾವಿದನಂತೆ ಕಲಾತ್ಮಕವಾಗಿ ಬಳಸಲಾಗಿದೆ. ಚಿತ್ರದ ಹಲವು ಸನ್ನಿವೇಶಗಳಲ್ಲಿ ಈ ‘ಆಂಬು ಆಟೋ’ ಪ್ರಮುಖ ಪಾತ್ರವಹಿಸುತ್ತದೆಯಂತೆ.
‘X&Y’ ಚಿತ್ರಕ್ಕೆ ವಾಸುಕಿ ವೈಭವಿ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು ಛಾಯಾಗ್ರಹಣ ಮತ್ತು ಕೌಶಿಕ್ ಹರ್ಷ ಸಂಗೀತವಿದ್ದು, ಚಿತ್ರದಲ್ಲಿ ಸತ್ಯಪ್ರಕಾಶ್, ಬೃಂದಾ ಆಚಾರ್ಯ, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರು, ತೇನಪ್ಪನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿ ಪ್ರವಾಸದ ಬಗ್ಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಶ್ರೀ ಕ್ಷೇತ್ರ ಮಲೆ…
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಮತ್ತೊಬ್ಬ ಪಾದಯಾತ್ರಿಕ…
ಬೆಂಗಳೂರು: ನಾನು ಸಿದ್ದರಾಮಯ್ಯ ಏನು ಮಾತಾಡಿಕೊಂಡಿದ್ದೇವೆ ಎನ್ನುವುದು ನನಗೆ ಗೊತ್ತಿದೆ. ನಾವು ಕದ್ದುಮುಚ್ಚಿ ಮಾತನಾಡಿಕೊಂಡಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.…
ಬೆಂಗಳೂರು: ಕೇಂದ್ರ ಕಾರ್ಮಿಕ ಸಂಘಟನೆಗಳ ಕರೆ ಮೇರೆಗೆ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘವು ಇದೇ ಫೆಬ್ರವರಿ.12ರಂದು ರಾಜ್ಯಾದ್ಯಂತ…
ಮಂಡ್ಯ: ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಅಕ್ಕಮ್ಮನಕೊಪ್ಪಲು ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಮನೆ ಜಗುಲಿಯಲ್ಲೇ ಅನುಮಾನಾಸ್ಪದವಾಗಿ ಮಂಜು ಶವ ಪತ್ತೆಯಾಗಿದೆ. ದುಷ್ಕರ್ಮಿಗಳು…