ಮನರಂಜನೆ

ಅಮ್ಮನ ಹುಡುಕಾಟದ ಕಥೆ; ‘X&Y’ ಟ್ರೇಲರ್‌ ಬಿಡುಗಡೆ

ಸತ್ಯಪ್ರಕಾಶ್‍ ನಿರ್ದೇಶನದ, ನಿರ್ಮಾಣದ, ವಿತರಣೆಯ ಮತ್ತು ನಾಯಕತ್ವದ ‘X&Y’ ಚಿತ್ರವು ಜೂನ್‍.26ಕ್ಕೆ ಬಿಡುಗಡೆಯಾಗುತ್ತಿದೆ. ಬಿಡುಗಡೆ ಹತ್ತಿರ ಬರುತ್ತಿದ್ದಂತೆ ಚಿತ್ರತಂಡವು ಟ್ರೇಲರ್ ‍ಬಿಡುಗಡೆ ಮಾಡಿದೆ.

ಇದು ಸತ್ಯಪ್ರಕಾಶ್‍ ನಿರ್ದೇಶನದ ನಾಲ್ಕನೇ ಚಿತ್ರ. ‘ರಾಮಾ ರಾಮಾ ರೇ’, ‘ಒಂದಲ್ಲ ಎರಡಲ್ಲ’ ಮತ್ತು ‘ಮ್ಯಾನ್‍ ಆಫ್‍ ದಿ ಮ್ಯಾಚ್‍’ ಚಿತ್ರಗಳ ನಂತರ ಸತ್ಯ ಪ್ರಕಾಶ್‍, ಈ ಚಿತ್ರದಲ್ಲಿ ಗಂಭೀರ ವಿಷಯವನ್ನು ಹಾಸ್ಯದ ಮೂಲಕ ಹೇಳುವ ಪ್ರಯತ್ನ ಮಾಡಿದ್ದಾರೆ. ಕೆಲವೇ ಪಾತ್ರಗಳ ಸುತ್ತ ಸುತ್ತುವ ಈ ಚಿತ್ರಕ್ಕಾಗಿ ಬೆಂಗಳೂರು, ಮಂಗಳೂರು ಮುಂತಾದ ಕಡೆ ಚಿತ್ರೀಕರಣ ಮಾಡಲಾಗಿದೆ.

ಈ ಚಿತ್ರದಲ್ಲಿ ಸತ್ಯಪ್ರಕಾಶ್‍ ಆಟೋ ಡ್ರೈವರ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ‘X&Y’ ಚಿತ್ರದ ಮೂಲಕ ತಂದೆ-ತಾಯಿ ಆಗಲು ಹೊರಟಿರುವ ಇವತ್ತಿನ ತಲೆಮಾರಿನವರ ಕಥೆ ಹೇಳುವುದಕ್ಕೆ ಹೊರಟಿದ್ದಾರೆ ಸತ್ಯ ಪ್ರಕಾಶ್‍. ತಮ್ಮ ಹಿಂದಿನ ಚಿತ್ರಗಳಂತೆ ಈ ಚಿತ್ರಕ್ಕೆ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ರಚಿಸಿದ್ದಾರೆ.

ವಿಶೇಷವೆಂದರೆ, ಈ ಚಿತ್ರದಲ್ಲಿ ‘ಆಂಬು ಆಟೋ’ ಎಂಬ ಹೊಸ ಆಟೋ ಪರಿಚಯಿಸಲಾಗಿದೆ. ಈ ಆಟೋದ ವಿಶೇಷತೆ ಎಂದರೆ, ಆಂಬುಲೆನ್ಸ್‌ನಲ್ಲಿರುವಂತೆ ಎಲ್ಲ ಸೌಲಭ್ಯಗಳಿವೆ. ಈ ಆಟೋವನ್ನು ಚಿತ್ರದಲ್ಲಿ ಒಬ್ಬ ಕಲಾವಿದನಂತೆ ಕಲಾತ್ಮಕವಾಗಿ ಬಳಸಲಾಗಿದೆ. ಚಿತ್ರದ ಹಲವು ಸನ್ನಿವೇಶಗಳಲ್ಲಿ ಈ ‘ಆಂಬು ಆಟೋ’ ಪ್ರಮುಖ ಪಾತ್ರವಹಿಸುತ್ತದೆಯಂತೆ.

‘X&Y’ ಚಿತ್ರಕ್ಕೆ ವಾಸುಕಿ ವೈಭವಿ ಸಂಗೀತ, ಲವಿತ್ ಛಾಯಾಗ್ರಹಣ, ಬಿ.ಎಸ್. ಕೆಂಪರಾಜು ಛಾಯಾಗ್ರಹಣ ಮತ್ತು ಕೌಶಿಕ್ ಹರ್ಷ ಸಂಗೀತವಿದ್ದು, ಚಿತ್ರದಲ್ಲಿ ಸತ್ಯಪ್ರಕಾಶ್‍, ಬೃಂದಾ ಆಚಾರ್ಯ, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ, ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರು, ತೇನಪ್ಪನ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

12 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

12 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

13 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

14 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

19 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

19 hours ago