ಮನರಂಜನೆ

‘ರಾಮಾಯಣ’ಕ್ಕೆ ಬಂದ ಹಾಲಿವುಡ್‍ ಸಾಹಸ ನಿರ್ದೇಶಕ ಗೈ ನೋರಿಸ್‍

ಕಳೆದ ತಿಂಗಳಷ್ಟೇ ನಟ ಯಶ್‍, ಉಜ್ಜಯಿನಿಯಲ್ಲಿರುವ ಶ್ರೀ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೈವಿಕ ಆಶೀರ್ವಾದವನ್ನು ಪಡೆದಿದ್ದರು. ಸದ್ಯದಲ್ಲೇ, ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸುವುದಾಗಿ ಹೇಳಿದ್ದರು. ಅದರಂತೆ ಅವರು ಇದೀಗ ಮುಂಬೈನಲ್ಲಿ ‘ರಾಮಾಯಣ’ ಚಿತ್ರದ ಚಿತ್ರೀಕರಣದಲ್ಲಿ ತೊಡಗಿಸಿಕೊಂಡಿದ್ದಾರೆ.

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಚಿತ್ರಗಳಲ್ಲಿ ಒಂದಾಗಿರುವ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈ ಭಾಗದ ಚಿತ್ರೀಕರಣದಲ್ಲಿ ನಟ ಯಶ್‍ ಭಾಗವಹಿಸಿದ್ದಾರೆ. ಚಿತ್ರಕ್ಕಾಗಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಅದಕ್ಕಾಗಿ, ಹಾಲಿವುಡ್‌ನ ಖ್ಯಾತ ಮ್ಯಾಡ್ ಮ್ಯಾಕ್ಸ್ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರನ್ನು ಕರೆಸಲಾಗಿದೆ. ಇದಕ್ಕೂ ಮೊದಲು ಹಾಲಿವುಡ್‍ನ‌ ‘ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್‌’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ನೋರಿಸ್‍, ಇದೇ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಹಿಂದೆ ‘ದಂಗಲ್‍’ ಚಿತ್ರವನ್ನು ನಿರ್ದೇಶಿಸಿದ್ದ ನಿತೇಶ್ ತಿವಾರಿ, ‘ರಾಮಾಯಣ’ ಚಿತ್ರವನ್ನು ನಿರ್ದೇಶನ‌ ಮಾಡುತ್ತಿದ್ದಾರೆ. ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ಈ ಚಿತ್ರವನ್ನು ಜಂಟಿಯಾಗಿ ನಿರ್ಮಿಸುತ್ತಿದೆ. ‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಪೈಕಿ ಮೊದಲ ಭಾಗವು 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ಸನ್ನಿ ಡಿಯೋಲ್‍, ಆಂಜನೇಯನಾಗಿ ಅಭಿನಯಿಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

47 seconds ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

4 mins ago

ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್‌ ಗೌಡ ಅರೆಸ್ಟ್‌

ಚಿಕ್ಕಬಳ್ಳಾಪುರ: ನಗರಸಭೆ ಪೌರಾಯುಕ್ತೆಗೆ ನಿಂದನೆ, ಜೀವ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.…

19 mins ago

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

4 hours ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

4 hours ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

4 hours ago