ಮನರಂಜನೆ

ಸಿನಿಮಾ ಮುಂದಿನ ವರ್ಷ; ಸದ್ಯ ‘ರಾಮಾಯಣ’ ಚಿತ್ರದ ಟೀಸರ್ ಬಿಡುಗಡೆ

ಭಾರತೀಯ‌ ಚಿತ್ರರಂಗದ ನಿರೀಕ್ಷೆಯ ಸಿನಿಮಾಗಳಲ್ಲಿ ಒಂದಾಗಿರೋ ‘ರಾಮಾಯಣ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಈಗಾಗಲೇ ಯಶ್‍ ಸಹ ಒಂದು ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿ, ಇದೀಗ ಅಮೇರಿಕಾಗೆ ಹಾರಿದ್ದಾರೆ.

ಈ ಮಧ್ಯೆ, ಗುರುವಾರ ಬೆಳಿಗ್ಗೆ ಚಿತ್ರದ ಟೈಟಲ್‍ ಟೀಸರ್ ಬಿಡುಗಡೆಯಾಗಿದೆ. ‘ರಾಮಾಯಣ’ ಸಿನಿಮಾದಲ್ಲಿ ರಾಮನ ಪಾತ್ರದಲ್ಲಿ ರಣಬೀರ್ ಕಪೂರ್ ಅಭಿನಯಿಸುತ್ತಿದ್ದಾರೆ. ಸೀತೆಯಾಗಿ ಸಾಯಿಪಲ್ಲವಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು, ರಾವಣನ ಪಾತ್ರ ಮಾಡುತ್ತಿದ್ದಾರೆ ಯಶ್‍. ಸನ್ನಿ ಡಿಯೋಲ್‍, ಆಂಜನೇಯನಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರವನ್ನು ನಿತೇಶ್ ತಿವಾರಿ ನಿರ್ದೇಶನ‌ ಮಾಡುತ್ತಿದ್ದು, ನಮಿತ್ ಮಲ್ಹೋತ್ರಾ ಅವರ ಪ್ರೈಮ್ ಫೋಕಸ್ ಸ್ಟುಡಿಯೋಸ್ ಮತ್ತು ಯಶ್ ಅವರ ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಲ್ಲಿ ನಿರ್ಮಾಣವಾಗುತ್ತಿದೆ.

‘ರಾಮಾಯಣ’ ಚಿತ್ರದ ಚಿತ್ರೀಕರಣ ಕಳೆದ ತಿಂಗಳಿನಿಂದ ಭರದಿಂದ ಸಾಗುತ್ತಿದ್ದು, ಚಿತ್ರೀಕರಣದಲ್ಲಿ ನಟ ಯಶ್‍ ಸಹ ಭಾಗವಹಿಸಿದ್ದಾರೆ. ಚಿತ್ರಕ್ಕಾಗಿ ಸಾಹಸ ದೃಶ್ಯಗಳ ಚಿತ್ರೀಕರಣ ನಡೆಯುತ್ತಿದ್ದು, ಅದಕ್ಕಾಗಿ ಹಾಲಿವುಡ್‌ನ ಜನಪ್ರಿಯ ಸ್ಟಂಟ್ ನಿರ್ದೇಶಕ ಗೈ ನೋರಿಸ್ ಅವರನ್ನು ಕರೆಸಲಾಗಿದೆ. ಇದಕ್ಕೂ ಮೊದಲು ಹಾಲಿವುಡ್‍ನ‌ ‘ಮ್ಯಾಡ್ ಮ್ಯಾಕ್ಸ್: ಫ್ಯೂರಿ ರೋಡ್ ಮತ್ತು ದಿ ಸುಸೈಡ್ ಸ್ಕ್ವಾಡ್‌’ ಮುಂತಾದ ಚಿತ್ರಗಳಿಗೆ ಸಾಹಸ ನಿರ್ದೇಶನ ಮಾಡಿದ್ದ ನೋರಿಸ್‍, ಇದೇ ಮೊದಲ ಬಾರಿಗೆ ಭಾರತೀಯ ಚಿತ್ರವೊಂದಕ್ಕೆ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗಿದೆ.

‘ರಾಮಾಯಣ’ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗುತ್ತಿದ್ದು, ಈ ಪೈಕಿ ಮೊದಲ ಭಾಗವು 2026ರ ದೀಪಾವಳಿಗೆ ಬಿಡುಗಡೆಯಾದರೆ, ಎರಡನೇ ಭಾಗ 2027ರ ದೀಪಾವಳಿಗೆ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಕಣಿಯನಹುಂಡಿ ತೋಟದ ಮನೆಯಲ್ಲಿ ನೆರವೇರಲಿದೆ ಎಸ್‌.ಜಾನಕಿ ಅವರ ಅಂತ್ಯಕ್ರಿಯೆ

ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…

37 mins ago

ಜಾನಕಿ ಅಮ್ಮ ಮೊದಲು, ಕೊನೆಯ ಹಾಡು ಹಾಡಿದ್ದು, ಗಾಯನ ನಿಲ್ಲಿಸಿದ್ದು ಮೈಸೂರಿನಲ್ಲೇ

ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಜೀವಮಾನದ ಮೊದಲ ಸಾರ್ವಜನಿಕ ಗಾಯನ ಕಾರ್ಯಕ್ರಮ ಮೈಸೂರಿನಿಂದಲೇ ಆರಂಭವಾಗಿತ್ತು. ಅಚ್ಚರಿಯೆಂದರೆ ಅವರ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಎಸ್‌ಐಆರ್ : ಕರ್ನಾಟಕದ ಕ್ರಮ ಬಿಜೆಪಿಗೆ ಕಹಿ ಗುಳಿಗೆ !

ಕಳೆದ ಒಂದು ವರ್ಷದಿಂದ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆಯದೇ ಸದ್ದು. ಇದೇನು ಹೊಸ ಬೆಳವಣಿಗೆಯಲ್ಲ. ಇದುವರೆಗೆ ಚುನಾವಣಾ ಆಯೋಗ ದೇಶದಾದ್ಯಂತ…

2 hours ago

ಮೈಸೂರು | ನೆಚ್ಚಿನ ತೋಟದಲ್ಲಿ ಎಸ್.ಜಾನಕಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆ

ಮೈಸೂರು : ಗಾನಕೋಗಿಲೆ ಎಸ್. ಜಾನಕಿ ಅವರ ಅಂತ್ಯಸಂಸ್ಕಾರದ ಸಿದ್ಧತೆಗಳು ಮೈಸೂರಿನ ಸರಗೂರು ಬಳಿಯ ಕಣಿಯನಹುಂಡಿ ಗ್ರಾಮದಲ್ಲಿ ಭರದಿಂದ ಸಾಗುತ್ತಿದ್ದು,…

3 hours ago

ಜಾನಕಿ ಅಮ್ಮನ ಸ್ಮಾರಕ ನಿರ್ಮಾಣವಾಗಬೇಕು : ಖ್ಯಾತ ನಿರ್ದೇಶಕ ಹಂಸಲೇಖ

ಮೈಸೂರು : ಕರುನಾಡಿನ ಮಣ್ಣಲ್ಲಿ ಜಾನಕಿ ಅಮ್ಮ ಕಣ್ಮುಚ್ಚಿದ್ದಾರೆ. ಅವರಿಗಾಗಿ ಕರುನಾಡ ಜನ ಕಣ್ಣು ತೆರೆಯಬೇಕು. ಅವರ ಸ್ಮಾರಕ ನಿರ್ಮಾಣವಾಗಬೇಕು…

4 hours ago

ಹಾಡುಪಾಡು | ಎಸ್‌ಐಆರ್‌

ಫಾತಿಮಾ ರಲಿಯಾ ಯು ಟ್ಯೂಬ್‌ನಲ್ಲಿ ಒಬ್ಬೊಬ್ಬ ತಜ್ಞರೂ ಒಂದೊಂದು ಮಾಹಿತಿ ಕೊಡುತ್ತಿದ್ದರು. ಇದೆಲ್ಲಾ ಗೊಂದಲ ಬೇಡ ಎಂದು ಚಾಟ್‌ಜಿಪಿಟಿಯ ಬಳಿ…

5 hours ago