ಮನರಂಜನೆ

ಸೌಂದರ್ಯ ಅವರನ್ನು ನೋಡೋಕೆ ಭಯವಾಗುತ್ತಿತ್ತು: ರಮೇಶ್‍ ನೆನಪು

‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್‍ ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರವ ರಮೇಶ್ ಅರವಿಂದ್, ‘ಕಾಳಿ ಮೇಕಪ್‍ನಲ್ಲಿ ರಾಧಿಕಾ ಅವರನ್ನು ನೋಡಿದಾಗ, ‘ಮೇಡಂ ದಯವಿಟ್ಟು ಮೇಕಪ್‍ ತೆಗೆದು ಬನ್ನಿ ಎಂದು ಹೇಳಿದೆ. ‘ಆಪ್ತಮಿತ್ರ’ ಚಿತ್ರದಲ್ಲೂ ಸೌಂದರ್ಯ ಅವರಿಗೂ ಇದೇ ಹೇಳಿದ್ದೆ. ಕ್ಲೈಮ್ಯಾಕ್ಸ್ನಲ್ಲಿ ನಾಗವಲ್ಲಿ ಭಾಗದ ಚಿತ್ರೀಕರಣ ಮುಗಿಸಿ ಬಂದಾಗ, ಸೌಂದರ್ಯ ಅವರನ್ನು ನೋಡೋಕೆ ಭಯವಾಗುತ್ತಿತ್ತು. ಮೇಕಪ್‍ ತೆಗೆದು ಬನ್ನಿ ಆಮೇಲೆ ಮಾತಾಡೋಣ ಎಂದು ಹೇಳಿದ್ದೆ. ಆ ತರಹದ ಒಂದು ಶಕ್ತಿ ಕೆಲವು ಪಾತ್ರಗಳಿಗೆ ಇರುತ್ತದೆ’ ಎಂದರು.

ಈ ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ಮಾತನಾಡುವ ಅವರು, ‘ಈ ಚಿತ್ರದಲ್ಲಿ ನಾನು ಖಡಕ್‍ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲಿ ಅವನು ಬೇರೆ ಲೋಕದಿಂದ ಬಂದ ಒಂದು ಶಕ್ತಿಯ ವಿರುದ್ಧ ಹೋರಾಡಬೇಕು. ಆಗ ಆ ಪೊಲೀಸ್‍ ಅಧಿಕಾರಿ ಏನು ಮಾಡುತ್ತಾನೆ ಎನ್ನುವುದು ಕಥೆ. ‘ಆಪ್ತಮಿತ್ರ’ ಚಿತ್ರದಲ್ಲಿ ನಮ್ಮ ಮನೆಯಲ್ಲೊಂದು ಸಮಸ್ಯೆ ಇರುತ್ತದೆ. ಆಗ ಅವಿನಾಶ್‍ ಅವರು ಬಂದು ಇಲ್ಲಿ ಏನೋ ಸಮಸ್ಯೆ ಇದೆ ಎಂದು ಹೇಳುತ್ತಾರೆ. ಅದೇ ರೀತಿ, ಈ ಚಿತ್ರದಲ್ಲಿ ಇನ್ನೊಂದು ಸಮಸ್ಯೆ ಎದುರಿಸುತ್ತಿರುತ್ತೇನೆ. ಅದನ್ನು ಪರಿಹರಿಸೋಕೆ ‘ಭೈರಾದೇವಿ’ ಬರುತ್ತಾರಾ, ಇಲ್ಲವೋ’ ಎಂಬುದೇ ಕಥೆ ಎಂದರು ರಮೇಶ್.

ಈ ಚಿತ್ರ ಇರೋದೇ ಸಾವಿನ ನಂತರ ಏನಾದರೂ ಇದೆಯಾ? ಎಂಬ ಕುತೂಹಲದ ಸುತ್ತ ಎನ್ನುವ ಅವರು, ‘ಒಂದು ವೇಳೆ ಸಾವಿನ ನಂತರ ಯಾರಾದರೂ ಮತ್ತೆ ಬಂದರೆ ಏನಾಗುತ್ತದೆ? ಎಂಬ ವಿಷಯದ ಬಗ್ಗೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರಕ್ಕಾಗಿ ಶಾಂತಿನಗರದ ಸ್ಮಶಾನದಲ್ಲಿ ರಾತ್ರಿ ಚಿತ್ರೀಕರಣ ಮಾಡುತ್ತಿದ್ದೆವು. ಒಂದು ರಾತ್ರಿ ಒಬ್ಬರು ಲೇಡಿ ಕಾನ್ಸಟಬಲ್‍ ಬಂದರು. ನನ್ನ ಹತ್ತಿರ ಬಂದು ಒಂದು ಸೆಲ್ಫಿ ಬೇಕು ಎಂದರು. ‘ಮೂರು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ಒಂದು ದಿನ ಒಳಗೆ ಬಂದಿರಲಿಲ್ಲ. ಪೊಲೀಸರೇ ಹಾಗೆ ಹೇಳುವಾಗ, ಚಿತ್ರತಂಡ ಅಲ್ಲಿ 10 ದಿನಗಳ ಕಾಲ ಚಿತ್ರೀಕರಣ ಮಾಡಿದೆ. ಹಗಲು-ರಾತ್ರಿ, ಹೀರೋ-ವಿಲನ್‍, ಹುಟ್ಟು-ಸಾವು ತರಹ ದಿವ್ಯಶಕ್ತಿ ಮತ್ತು ದುಷ್ಟಶಕ್ತಿ ಸಹ ಒಂದುದು ವೈರುಧ್ಯ. ಅವೆರಡೂ ಸವಾಲು ಹಾಕಿಕೊಂಡರೆ ಏನಾಗುತ್ತದೆ ಎನ್ನುವ ಚಿತ್ರವೇ ‘ಭೈರಾದೇವಿ’’ ಎಂದರು.

ಭೂಮಿಕಾ

Recent Posts

ಹೊರ್ಮುಜ್‌ ಬಿಕ್ಕಟ್ಟು | ಇರಾನ್‌ನ ಬಂದರುಗಳಿಗೆ ಅಮೆರಿಕದ ದಿಗ್ಬಂಧನ ಪ್ರಾರಂಭ

ಟೆಹ್ರಾನ್‌ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…

8 hours ago

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ : ಹೈಕೋರ್ಟ್‌ ಆದೇಶಕ್ಕೆ ಸುಪ್ರೀಂ ತಡೆ

ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…

9 hours ago

ಅನಗತ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ ; ಕೈ ಶಾಸಕರಿಗೆ ಡಿ.ಕೆ.ಶಿ ಎಚ್ಚರಿಕೆ

ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…

9 hours ago

ಹೆದ್ದಾರಿ ತಡೆದು ಪ್ರತಿಭಟನೆ : ಬಂಡೀಪುರ ರಾತ್ರಿ ಸಂಚಾರ ತೆರವು ಮಾಡದಂತೆ ಆಗ್ರಹ

ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…

10 hours ago

ಕೊಡಗು | ತೆರೆದ ಬಾವಿಗೆ ಬಿದ್ದ ಕಾಡಾನೆ ಮರಿ , ರಕ್ಷಣೆ

ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…

10 hours ago

ಹೊರ್ಮುಜ್‌ ಬಿಕ್ಕಟ್ಟು | ಅಮೆರಿಕ ದಿಗ್ಬಂಧನ ಬೆನ್ನಲ್ಲೇ ಇರಾನ್‌ ವಾರ್ನಿಂಗ್‌

ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…

10 hours ago