ಮನರಂಜನೆ

ಸೌಂದರ್ಯ ಅವರನ್ನು ನೋಡೋಕೆ ಭಯವಾಗುತ್ತಿತ್ತು: ರಮೇಶ್‍ ನೆನಪು

‘ಭೈರಾದೇವಿ’ ಚಿತ್ರದ ಬಿಡುಗಡೆಗೆ ಎದುರು ನೋಡುತ್ತಿರುವ ರಮೇಶ್‍ಗೆ ‘ಆಪ್ತಮಿತ್ರ’ ಚಿತ್ರ ಪದೇಪದೇ ನೆನಪಗಾಗುತ್ತಿದೆ. ಅದಕ್ಕೆ ಕಾರಣವೂ ಇದೆ. ಆ ಕಾರಣವನ್ನು ರಮೇಶ್‍ ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಸಮಾರಂಭದಲ್ಲಿ ಹೇಳಿಕೊಂಡಿದ್ದಾರೆ.

ಈ ಕುರಿತು ಮಾತನಾಡಿರವ ರಮೇಶ್ ಅರವಿಂದ್, ‘ಕಾಳಿ ಮೇಕಪ್‍ನಲ್ಲಿ ರಾಧಿಕಾ ಅವರನ್ನು ನೋಡಿದಾಗ, ‘ಮೇಡಂ ದಯವಿಟ್ಟು ಮೇಕಪ್‍ ತೆಗೆದು ಬನ್ನಿ ಎಂದು ಹೇಳಿದೆ. ‘ಆಪ್ತಮಿತ್ರ’ ಚಿತ್ರದಲ್ಲೂ ಸೌಂದರ್ಯ ಅವರಿಗೂ ಇದೇ ಹೇಳಿದ್ದೆ. ಕ್ಲೈಮ್ಯಾಕ್ಸ್ನಲ್ಲಿ ನಾಗವಲ್ಲಿ ಭಾಗದ ಚಿತ್ರೀಕರಣ ಮುಗಿಸಿ ಬಂದಾಗ, ಸೌಂದರ್ಯ ಅವರನ್ನು ನೋಡೋಕೆ ಭಯವಾಗುತ್ತಿತ್ತು. ಮೇಕಪ್‍ ತೆಗೆದು ಬನ್ನಿ ಆಮೇಲೆ ಮಾತಾಡೋಣ ಎಂದು ಹೇಳಿದ್ದೆ. ಆ ತರಹದ ಒಂದು ಶಕ್ತಿ ಕೆಲವು ಪಾತ್ರಗಳಿಗೆ ಇರುತ್ತದೆ’ ಎಂದರು.

ಈ ಚಿತ್ರದಲ್ಲಿನ ತಮ್ಮ ಪಾತ್ರದ ಕುರಿತು ಮಾತನಾಡುವ ಅವರು, ‘ಈ ಚಿತ್ರದಲ್ಲಿ ನಾನು ಖಡಕ್‍ ಪೊಲೀಸ್‍ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಚಿತ್ರದಲ್ಲಿ ಅವನು ಬೇರೆ ಲೋಕದಿಂದ ಬಂದ ಒಂದು ಶಕ್ತಿಯ ವಿರುದ್ಧ ಹೋರಾಡಬೇಕು. ಆಗ ಆ ಪೊಲೀಸ್‍ ಅಧಿಕಾರಿ ಏನು ಮಾಡುತ್ತಾನೆ ಎನ್ನುವುದು ಕಥೆ. ‘ಆಪ್ತಮಿತ್ರ’ ಚಿತ್ರದಲ್ಲಿ ನಮ್ಮ ಮನೆಯಲ್ಲೊಂದು ಸಮಸ್ಯೆ ಇರುತ್ತದೆ. ಆಗ ಅವಿನಾಶ್‍ ಅವರು ಬಂದು ಇಲ್ಲಿ ಏನೋ ಸಮಸ್ಯೆ ಇದೆ ಎಂದು ಹೇಳುತ್ತಾರೆ. ಅದೇ ರೀತಿ, ಈ ಚಿತ್ರದಲ್ಲಿ ಇನ್ನೊಂದು ಸಮಸ್ಯೆ ಎದುರಿಸುತ್ತಿರುತ್ತೇನೆ. ಅದನ್ನು ಪರಿಹರಿಸೋಕೆ ‘ಭೈರಾದೇವಿ’ ಬರುತ್ತಾರಾ, ಇಲ್ಲವೋ’ ಎಂಬುದೇ ಕಥೆ ಎಂದರು ರಮೇಶ್.

ಈ ಚಿತ್ರ ಇರೋದೇ ಸಾವಿನ ನಂತರ ಏನಾದರೂ ಇದೆಯಾ? ಎಂಬ ಕುತೂಹಲದ ಸುತ್ತ ಎನ್ನುವ ಅವರು, ‘ಒಂದು ವೇಳೆ ಸಾವಿನ ನಂತರ ಯಾರಾದರೂ ಮತ್ತೆ ಬಂದರೆ ಏನಾಗುತ್ತದೆ? ಎಂಬ ವಿಷಯದ ಬಗ್ಗೆ ಹೇಳುವ ಪ್ರಯತ್ನ ಮಾಡಲಾಗಿದೆ. ಈ ಚಿತ್ರಕ್ಕಾಗಿ ಶಾಂತಿನಗರದ ಸ್ಮಶಾನದಲ್ಲಿ ರಾತ್ರಿ ಚಿತ್ರೀಕರಣ ಮಾಡುತ್ತಿದ್ದೆವು. ಒಂದು ರಾತ್ರಿ ಒಬ್ಬರು ಲೇಡಿ ಕಾನ್ಸಟಬಲ್‍ ಬಂದರು. ನನ್ನ ಹತ್ತಿರ ಬಂದು ಒಂದು ಸೆಲ್ಫಿ ಬೇಕು ಎಂದರು. ‘ಮೂರು ವರ್ಷಗಳಿಂದ ಇಲ್ಲಿ ಕೆಲಸ ಮಾಡುತ್ತಿದ್ದೇನೆ. ಒಂದು ದಿನ ಒಳಗೆ ಬಂದಿರಲಿಲ್ಲ. ಪೊಲೀಸರೇ ಹಾಗೆ ಹೇಳುವಾಗ, ಚಿತ್ರತಂಡ ಅಲ್ಲಿ 10 ದಿನಗಳ ಕಾಲ ಚಿತ್ರೀಕರಣ ಮಾಡಿದೆ. ಹಗಲು-ರಾತ್ರಿ, ಹೀರೋ-ವಿಲನ್‍, ಹುಟ್ಟು-ಸಾವು ತರಹ ದಿವ್ಯಶಕ್ತಿ ಮತ್ತು ದುಷ್ಟಶಕ್ತಿ ಸಹ ಒಂದುದು ವೈರುಧ್ಯ. ಅವೆರಡೂ ಸವಾಲು ಹಾಕಿಕೊಂಡರೆ ಏನಾಗುತ್ತದೆ ಎನ್ನುವ ಚಿತ್ರವೇ ‘ಭೈರಾದೇವಿ’’ ಎಂದರು.

ಭೂಮಿಕಾ

Recent Posts

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

9 hours ago

ಓದುಗರ ಪತ್ರ: ಕಠಿಣ ಕ್ರಮ ಅಗತ್ಯ

ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್‌ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…

17 hours ago

ಓದುಗರ ಪತ್ರ: ಕಸ ವಿಲೇವಾರಿಗೆ ವೈಜ್ಞಾನಿಕ ಪರಿಹಾರ ಅಗತ್ಯ

ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…

17 hours ago

ಕೇಂದ್ರ ಸರ್ಕಾರದ ಮೇಲೆ ಜೆನ್ ಝೀ ಚಳುವಳಿಯ ತೂಗುಗತ್ತಿ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…

17 hours ago

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

20 hours ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

20 hours ago