ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್, ಶನಿವಾರ ಮುಂಬೈನಲ್ಲಿ ಬಿಡುಗಡೆ ಆಗಿದೆ.
‘ಘುಸ್ಪೈಥಿಯಾ‘ (Ghuspaithiya) ಚಿತ್ರವನ್ನು ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ಜೊತೆಯಾಗಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರವು ತಮಿಳಿನ ‘ತಿರುಟ್ಟುಪಯಲೆ 2’ ಚಿತ್ರದ ರೀಮೇಕ್ ಆಗಿದೆ. ಇದೇ ಚಿತ್ರವನ್ನು ರಮೇಶ್ ರೆಡ್ಡಿ, ಕನ್ನಡದಲ್ಲಿ ರಮೇಶ್ ಅರವಿಂದ್ ನಿರ್ದೇಶನದಲ್ಲಿ ‘100’ ಎಂಬ ಚಿತ್ರ ನಿರ್ಮಿಸಿದ್ದರು. ಈಗ ಸುಸಿ ಗಣೇಶನ್ ಮತ್ತು ರಮೇಶ್ ರೆಡ್ಡಿ ಇಬ್ಬರೂ ಚಿತ್ರವನ್ನು ಹಿಂದಿಗೆ ತೆಗೆದುಕೊಂಡು ಹೋಗಿದ್ದಾರೆ.
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ‘ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ’ ಎಂದು ಹೇಳಿದ್ದಾರೆ.
‘ಘುಸ್ಪೈಥಿಯಾ‘ ಚಿತ್ರದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿರುವ ಈ ಚಿತ್ರವು ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿದೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…