ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್, ಶನಿವಾರ ಮುಂಬೈನಲ್ಲಿ ಬಿಡುಗಡೆ ಆಗಿದೆ.
‘ಘುಸ್ಪೈಥಿಯಾ‘ (Ghuspaithiya) ಚಿತ್ರವನ್ನು ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ಜೊತೆಯಾಗಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರವು ತಮಿಳಿನ ‘ತಿರುಟ್ಟುಪಯಲೆ 2’ ಚಿತ್ರದ ರೀಮೇಕ್ ಆಗಿದೆ. ಇದೇ ಚಿತ್ರವನ್ನು ರಮೇಶ್ ರೆಡ್ಡಿ, ಕನ್ನಡದಲ್ಲಿ ರಮೇಶ್ ಅರವಿಂದ್ ನಿರ್ದೇಶನದಲ್ಲಿ ‘100’ ಎಂಬ ಚಿತ್ರ ನಿರ್ಮಿಸಿದ್ದರು. ಈಗ ಸುಸಿ ಗಣೇಶನ್ ಮತ್ತು ರಮೇಶ್ ರೆಡ್ಡಿ ಇಬ್ಬರೂ ಚಿತ್ರವನ್ನು ಹಿಂದಿಗೆ ತೆಗೆದುಕೊಂಡು ಹೋಗಿದ್ದಾರೆ.
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ‘ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ’ ಎಂದು ಹೇಳಿದ್ದಾರೆ.
‘ಘುಸ್ಪೈಥಿಯಾ‘ ಚಿತ್ರದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿರುವ ಈ ಚಿತ್ರವು ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿದೆ.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…