ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್, ಶನಿವಾರ ಮುಂಬೈನಲ್ಲಿ ಬಿಡುಗಡೆ ಆಗಿದೆ.
‘ಘುಸ್ಪೈಥಿಯಾ‘ (Ghuspaithiya) ಚಿತ್ರವನ್ನು ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ಜೊತೆಯಾಗಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರವು ತಮಿಳಿನ ‘ತಿರುಟ್ಟುಪಯಲೆ 2’ ಚಿತ್ರದ ರೀಮೇಕ್ ಆಗಿದೆ. ಇದೇ ಚಿತ್ರವನ್ನು ರಮೇಶ್ ರೆಡ್ಡಿ, ಕನ್ನಡದಲ್ಲಿ ರಮೇಶ್ ಅರವಿಂದ್ ನಿರ್ದೇಶನದಲ್ಲಿ ‘100’ ಎಂಬ ಚಿತ್ರ ನಿರ್ಮಿಸಿದ್ದರು. ಈಗ ಸುಸಿ ಗಣೇಶನ್ ಮತ್ತು ರಮೇಶ್ ರೆಡ್ಡಿ ಇಬ್ಬರೂ ಚಿತ್ರವನ್ನು ಹಿಂದಿಗೆ ತೆಗೆದುಕೊಂಡು ಹೋಗಿದ್ದಾರೆ.
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ‘ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ’ ಎಂದು ಹೇಳಿದ್ದಾರೆ.
‘ಘುಸ್ಪೈಥಿಯಾ‘ ಚಿತ್ರದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿರುವ ಈ ಚಿತ್ರವು ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿದೆ.
ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…