ಮನರಂಜನೆ

ಹಿಂದಿಗೆ ರಮೇಶ್‍ ರೆಡ್ಡಿ; ‘ಘುಸ್ಪೈಥಿಯಾ’ ಚಿತ್ರ ನಿರ್ಮಾಣ

ಕನ್ನಡದಲ್ಲಿ ‘ಗಾಳಿಪಟ 2’, ‘100’, ‘ಉಪ್ಪು ಹುಳಿ ಖಾರ’ ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ಮಿಸಿರುವ ರಮೆಶ್‍ ರೆಡ್ಡಿ, ಇದೀಗ ಹಿಂದಿಯಲ್ಲೊಂದು ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಕೆಲವು ವರ್ಷಗಳ ಹಿಂದೆಯೇ ಈ ಚಿತ್ರವನ್ನು ಅವರು ಪ್ರಾರಂಭಿಸಿದ್ದು, ಚಿತ್ರವು ಆಗಸ್ಟ್ 09ರಂದು ಬಿಡುಗಡೆಯಾಗುತ್ತಿದೆ. ಅದಕ್ಕೂ ಮೊದಲು ಈ ಚಿತ್ರದ ಟ್ರೇಲರ್‍, ಶನಿವಾರ ಮುಂಬೈನಲ್ಲಿ ಬಿಡುಗಡೆ ಆಗಿದೆ.

‘ಘುಸ್ಪೈಥಿಯಾ‘ (Ghuspaithiya) ಚಿತ್ರವನ್ನು ರಮೇಶ್ ರೆಡ್ಡಿ, ಜ್ಯೋತಿಕ ಶೆಣೈ ಹಾಗೂ ಮಂಜರಿ ಸುಸಿ ಗಣೇಶನ್ ಜೊತೆಯಾಗಿ ನಿರ್ಮಿಸಿದ್ದಾರೆ. ಈ ಚಿತ್ರವನ್ನು ಸುಸಿ ಗಣೇಶನ್ ನಿರ್ದೇಶಿಸಿದ್ದಾರೆ. ಸೈಬರ್ ಕ್ರೈಮ್ ಕಥಾಹಂದರ ಹೊಂದಿರುವ ಈ ಚಿತ್ರವು ತಮಿಳಿನ ‘ತಿರುಟ್ಟುಪಯಲೆ 2’ ಚಿತ್ರದ ರೀಮೇಕ್‍ ಆಗಿದೆ. ಇದೇ ಚಿತ್ರವನ್ನು ರಮೇಶ್‍ ರೆಡ್ಡಿ, ಕನ್ನಡದಲ್ಲಿ ರಮೇಶ್‍ ಅರವಿಂದ್ ನಿರ್ದೇಶನದಲ್ಲಿ ‘100’ ಎಂಬ ಚಿತ್ರ ನಿರ್ಮಿಸಿದ್ದರು. ಈಗ ಸುಸಿ ಗಣೇಶನ್‍ ಮತ್ತು ರಮೇಶ್‍ ರೆಡ್ಡಿ ಇಬ್ಬರೂ ಚಿತ್ರವನ್ನು ಹಿಂದಿಗೆ ತೆಗೆದುಕೊಂಡು ಹೋಗಿದ್ದಾರೆ.

ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಕನ್ನಡದಲ್ಲೇ ಮಾತನಾಡಿ ಎಲ್ಲರ ಗಮನ ಸೆಳೆದ ನಿರ್ಮಾಪಕ ರಮೇಶ್ ರೆಡ್ಡಿ, ‘ಈ ಚಿತ್ರಕ್ಕೆ ನಿಮ್ಮೆಲ್ಲರ ಸಹಕಾರವಿರಲಿ. ಮುಂದೆ ಕೂಡ ಹಿಂದಿ ಚಿತ್ರಗಳನ್ನು ನಿರ್ಮಿಸುತ್ತೇನೆ’ ಎಂದು ಹೇಳಿದ್ದಾರೆ.

‘ಘುಸ್ಪೈಥಿಯಾ‘ ಚಿತ್ರದಲ್ಲಿ ವಿನೀತ್ ಕುಮಾರ್ ಸಿಂಗ್, ಊರ್ವಶಿ ರೌಟೇಲ, ಅಕ್ಷಯ್ ಒಬೆರಾಯ್ ಮುಂತಾದವರು ನಟಿಸಿರುವ ಈ ಚಿತ್ರವು ಆಗಸ್ಟ್ 9ರಂದು AA ಫಿಲಂಸ್ ಮೂಲಕ ಬಿಡುಗಡೆಯಾಗಲಿದೆ.

ಭೂಮಿಕಾ

Recent Posts

ಮೇ.20ರಿಂದ ಸಾರಿಗೆ ಮುಷ್ಕರ : ಪರ್ಯಾಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಕೆಎಸ್‌ಆರ್‌ಟಿಸಿ ನೌಕರರು ಮೇ 20ರಿಂದ ಅನಿಧಿಷ್ಟಾವಧಿಯ ಮುಷ್ಕರಕ್ಕೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಪರ್ಯಾಯ ವ್ಯವಸ್ಥೆಗೆ…

7 hours ago

ಸರ್ಕಾರದ ಸಂಧಾನ ಸಭೆ ವಿಫಲ ; ಪ್ರತಿಭಟನೆ ನಿಶ್ಚಿತ

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ…

9 hours ago

ರಷ್ಯಾದಿಂದ ತೈಲ ಆಮದು ಮುಂದುವರಿಸಿದ ಭಾರತ

ಹೊಸದಿಲ್ಲಿ: ಅಮೆರಿಕದ ನಿರ್ಬಂಧಗಳ ವಿನಾಯಿತಿಯ ಸ್ಥಿತಿಯನ್ನು ಲೆಕ್ಕಿಸದೆ ಭಾರತವು ರಷ್ಯಾದ ಕಚ್ಚಾ ತೈಲ ಆಮದು ಮಾಡಿಕೊಳ್ಳುವುದನ್ನು ಮುಂದುವರಿಸುತ್ತದೆ ಎಂದು ಪೆಟ್ರೋಲಿಯಂ…

9 hours ago

ವಸ್ತುಸಂಗ್ರಹಾಲಯ ದಿನಾಚರಣೆ : ಗಮನಸೆಳೆದ ಸ್ಮಾರಕಗಳು ಮತ್ತು ಪ್ರಾಚ್ಯವಸ್ತುಗಳು

ಮೈಸೂರು : ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಹಾಗೂ ಇಂದಿರಾಗಾಂಧಿ ರಾಷ್ಟ್ರೀಯ ಮಾನವ ಸಂಗ್ರಹಾಲಯದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ…

9 hours ago

ಕೃಷಿ ಕ್ಷೇತ್ರ ಕುಸಿತದ ನಡುವೆಯೂ ಕೋಟಿ ಕೋಟಿ ವೆಚ್ಚದಲ್ಲಿ ಕಾಂಗ್ರೆಸ್ ಸಮಾವೇಶ‌ : ಅಶೋಕ ಆರೋಪ

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ…

10 hours ago

ವನ್ಯಜೀವಿಗಳಿಂದ ನಿರ್ದಿಷ್ಟ ಅಂತರ ಕಾಯ್ದುಕೊಳ್ಳಲು ಆದೇಶ

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ…

13 hours ago