ಮನರಂಜನೆ

‘ಏಕ್‍ ಲವ್‍ ಯಾ’ ನಂತರ ಇನ್ನೊಂದು ಪ್ರೇಮಕಥೆಯೊಂದಿಗೆ ಬಂದ ರಾಣ

ರಕ್ಷಿತಾ ಪ್ರೇಮ್‍ ಸಹೋದರ ರಾಣ, ‘ಏಕ್‍ ಲವ್‍ ಯಾ’ ಚಿತ್ರದ ನಾಯಕನಾಗಿ ಆಯ್ಕೆಯಾದಾಗ, ಆತ ಚಿತ್ರರಂಗದಲ್ಲಿ ದೊಡ್ಡ ಎತ್ತರಕ್ಕೆ ಬೆಳೆಯಬಹುದು ಎಂದು ಎಲ್ಲರಿಗೂ ನಿರೀಕ್ಷೆ ಇತ್ತು. ಆದರೆ, ರಾಣ ಅಭಿನಯದ ಮೊದಲ ಚಿತ್ರವೇ ಬಾಕ್ಸ್ ಆಫೀಸ್‍ನಲ್ಲಿ ಸೋಲು ಕಂಡಿತು. ಇದಾದ ಮೇಲೆ ರಾಣ ಸುದ್ದಿಯೇ ಇರಲಿಲ್ಲ. ಜೆ.ಪಿ.ನಗರದಲ್ಲಿ ಪಬ್‍ ನಡೆಸುತ್ತಿರುವ ರಾಣ, ಮತ್ತೆ ಬಣ್ಣ ಹಚ್ಚುತ್ತಾರೋ, ಇಲ್ಲವೋ ಎಂಬ ಪ್ರಶ್ನೆ ಎಲ್ಲರಲ್ಲೂ ಇರುವಾಗಲೇ ರಾಣ ಮತ್ತೆ ಬಂದಿದ್ದಾರೆ.

ತರುಣ್‍ ಸುಧೀರ್‍, ಅಟ್ಲಾಂಟ ನಾಗೇಂದ್ರ ಜೊತೆಗೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿರುವ ಸುದ್ದಿ ಗೊತ್ತೇ ಇದೆ. ಕಳೆದ ತಿಂಗಳು ಈ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರಕ್ಕೆ ರಾಣ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ರಾಣನನ್ನು ಬರಮಾಡಿಕೊಂಡಿದ್ದಾರೆ.

ಈ ಚಿತ್ರದಲ್ಲಿ ರಾಣ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ರಕ್ತ ಅಂಟಿರುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಾಣ ಫೋಟೋ ನೋಡಬಹುದೇ ಹೊರತು, ಅವರ ಹೆಸರು ಮತ್ತು ವಿಳಾಸ ಗೋಚರಿಸುವುದಿಲ್ಲ. ಕೆಲವು ದಶಕಗಳ ಹಿಂದಿನ ಲೈಸನ್ಸ್ ಆಗಿರುವುದರಿಂದ, ಕೆಲವು ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ ಎಂದು ಅಂದಾಜಿಸಬಹುದು.

ಈ ಹಿಂದೆ ‘ಕಾಟೇರ’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಪುನೀತ್ ರಂಗಸ್ವಾಮಿ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿ ನಡೆಯುವ ಕಥೆಯಾಗಲಿದೆಯಂತೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್‍ಲೈನ್‍ ನೀಡಲಾಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ಈ ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮತ್ತು ಕೆ.ಎಂ.ಪ್ರಕಾಶ್‍ ಸಂಕಲನವಿದೆ.

 

ಆಂದೋಲನ ಡೆಸ್ಕ್

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

13 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

2 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

3 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago