ಮನರಂಜನೆ

‘ಏಕ್‍ ಲವ್‍ ಯಾ’ ನಂತರ ಇನ್ನೊಂದು ಪ್ರೇಮಕಥೆಯೊಂದಿಗೆ ಬಂದ ರಾಣ

ರಕ್ಷಿತಾ ಪ್ರೇಮ್‍ ಸಹೋದರ ರಾಣ, ‘ಏಕ್‍ ಲವ್‍ ಯಾ’ ಚಿತ್ರದ ನಾಯಕನಾಗಿ ಆಯ್ಕೆಯಾದಾಗ, ಆತ ಚಿತ್ರರಂಗದಲ್ಲಿ ದೊಡ್ಡ ಎತ್ತರಕ್ಕೆ ಬೆಳೆಯಬಹುದು ಎಂದು ಎಲ್ಲರಿಗೂ ನಿರೀಕ್ಷೆ ಇತ್ತು. ಆದರೆ, ರಾಣ ಅಭಿನಯದ ಮೊದಲ ಚಿತ್ರವೇ ಬಾಕ್ಸ್ ಆಫೀಸ್‍ನಲ್ಲಿ ಸೋಲು ಕಂಡಿತು. ಇದಾದ ಮೇಲೆ ರಾಣ ಸುದ್ದಿಯೇ ಇರಲಿಲ್ಲ. ಜೆ.ಪಿ.ನಗರದಲ್ಲಿ ಪಬ್‍ ನಡೆಸುತ್ತಿರುವ ರಾಣ, ಮತ್ತೆ ಬಣ್ಣ ಹಚ್ಚುತ್ತಾರೋ, ಇಲ್ಲವೋ ಎಂಬ ಪ್ರಶ್ನೆ ಎಲ್ಲರಲ್ಲೂ ಇರುವಾಗಲೇ ರಾಣ ಮತ್ತೆ ಬಂದಿದ್ದಾರೆ.

ತರುಣ್‍ ಸುಧೀರ್‍, ಅಟ್ಲಾಂಟ ನಾಗೇಂದ್ರ ಜೊತೆಗೆ ಸೇರಿ ಚಿತ್ರವೊಂದನ್ನು ನಿರ್ಮಿಸುತ್ತಿರುವ ಸುದ್ದಿ ಗೊತ್ತೇ ಇದೆ. ಕಳೆದ ತಿಂಗಳು ಈ ಚಿತ್ರದ ಘೋಷಣೆಯಾಗಿತ್ತು. ಈಗ ಆ ಚಿತ್ರಕ್ಕೆ ರಾಣ ನಾಯಕನಾಗಿ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ರಾಣನನ್ನು ಬರಮಾಡಿಕೊಂಡಿದ್ದಾರೆ.

ಈ ಚಿತ್ರದಲ್ಲಿ ರಾಣ ಪಾತ್ರವೇನು? ಎಂಬ ವಿಷಯವನ್ನು ಚಿತ್ರತಂಡ ಬಹಿರಂಗಗೊಳಿಸಿಲ್ಲ. ರಕ್ತ ಅಂಟಿರುವ ಪೋಸ್ಟರ್‍ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ರಾಣ ಫೋಟೋ ನೋಡಬಹುದೇ ಹೊರತು, ಅವರ ಹೆಸರು ಮತ್ತು ವಿಳಾಸ ಗೋಚರಿಸುವುದಿಲ್ಲ. ಕೆಲವು ದಶಕಗಳ ಹಿಂದಿನ ಲೈಸನ್ಸ್ ಆಗಿರುವುದರಿಂದ, ಕೆಲವು ವರ್ಷಗಳ ಹಿಂದಿನ ಕಾಲಘಟ್ಟದ ಕಥೆಯನ್ನು ಈ ಚಿತ್ರದ ಮೂಲಕ ಹೇಳಲಾಗುತ್ತಿದೆ ಎಂದು ಅಂದಾಜಿಸಬಹುದು.

ಈ ಹಿಂದೆ ‘ಕಾಟೇರ’ ಚಿತ್ರದಲ್ಲಿ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದ ಪುನೀತ್ ರಂಗಸ್ವಾಮಿ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರವು ನೈಜ ಘಟನೆಯನ್ನು ಆಧರಿಸಿದ್ದು, ಕರ್ನಾಟಕ ಮತ್ತು ತಮಿಳುನಾಡಿನ ಗಡಿಯಲ್ಲಿ ನಡೆಯುವ ಕಥೆಯಾಗಲಿದೆಯಂತೆ. ಚಿತ್ರಕ್ಕೆ ‘ಏಳುಮಲೆಯ ಮಡಿಲಲ್ಲಿ ಎದೆ ನಡುಗಿಸುವ ಪ್ರೇಮಕಥೆ’ ಎಂಬ ಟ್ಯಾಗ್‍ಲೈನ್‍ ನೀಡಲಾಗಿದೆ. 90ರ ದಶಕದಲ್ಲಿ ನಡೆಯುವ ಕಥೆಯನ್ನು ಈ ಚಿತ್ರ ಒಳಗೊಂಡಿದೆ.

ಈ ಚಿತ್ರವು ಕನ್ನಡವಲ್ಲದೆ, ತೆಲುಗು ಮತ್ತು ತಮಿಳಿನಲ್ಲೂ ಬಿಡುಗಡೆಯಾಗುತ್ತಿದ್ದು, ಚಿತ್ರಕ್ಕೆ ಅದ್ವೈತ ಗುರುಮೂರ್ತಿ ಛಾಯಾಗ್ರಹಣ ಮತ್ತು ಕೆ.ಎಂ.ಪ್ರಕಾಶ್‍ ಸಂಕಲನವಿದೆ.

 

ಆಂದೋಲನ ಡೆಸ್ಕ್

Recent Posts

‘ಅಂಕಲ್ ಚೋಕ್’ ಕಟ್ಟಿದ ಬಿದಿರಿನ ಮಾಯಾಲೋಕ

ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…

51 mins ago

ಮುಚ್ಚುತ್ತಿರುವ ಚಿತ್ರಮಂದಿರ

ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…

55 mins ago

ಅಳಿಯ ಅಲ್ಲ, ಮಗಳ ಗಂಡ!

ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ…

58 mins ago

ವಿರಾಜಪೇಟೆ: ರಸ್ತೆಯುದ್ದಕ್ಕೂ ಗುಂಡಿಗಳದ್ದೇ ಪಾರಮ್ಯ

ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ…

1 hour ago

ಇದು ಅಂತ್ಯವಲ್ಲ-ಹೊಸ ಆರಂಭ

ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ…

1 hour ago

ಎಸ್‌ಐಆರ್ ಅರ್ಜಿ; ಅನಿವಾರ್ಯ ಮರ್ಜಿ

ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ…

1 hour ago