ಮನರಂಜನೆ

10 ವರ್ಷಗಳ ನಂತರ ಮತ್ತೆ ‘ರಂಗಿತರಂಗ’; ಜುಲೈ.04ರಂದು ಬಿಡುಗಡೆ

ಅನೂಪ್‍ ಭಂಡಾರಿ ನಿರ್ದೇಶನದ ಮತ್ತು ನಿರೂಪ್‍ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ ಎಚ್.ಕೆ.ಪ್ರಕಾಶ್ ನಿರ್ಮಾಣದ ಈ ಚಿತ್ರ ಯಶಸ್ವಿಯಾಗುವುದರ ಜೊತೆಗೆ, ಹೊಸಬರ ತಂಡವು ಗೆಲ್ಲಬಹುದು ಎಂದು ತೋರಿಸಿಕೊಟ್ಟಿತ್ತು.

ಇದೀಗ ‘ರಂಗಿತರಂಗ’ ಚಿತ್ರವು 10 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿ ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಚಿತ್ರವನ್ನು ಜುಲೈ.04ರಂದು ಪುನಃ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಈ ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ ಅನೂಪ್‍ ಭಂಡಾರಿ, ‘ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಭಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ.4ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ’ ಎಂದರು.

‘ಪೊಲೀಸ್ ಸ್ಟೋರಿ’ ಮತ್ತು ‘ರಂಗಿತರಂಗ’ ಚಿತ್ರಗಳು ನನ್ನ ಎರಡು ಕಣ್ಣುಗಳು ಎಂದ ಹಿರಿಯ ನಟ ಸಾಯಿಕುಮಾರ್‍, ‘ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ’ ಎಂದು ಶುಭ ಹಾರೈಸಿದರು.

ಅಣ್ಣನ ಮೊದಲ ಚಿತ್ರಕ್ಕೆ ನಾನೇ ಹೀರೋ ಎಂದಾಗ, ಅದ ಖುಷಿ ಅಷ್ಟಿಷ್ಟಲ್ಲ ಎಂದ ನಿರೂಪ್ ಭಂಡಾರಿ, ‘ನಾನು ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ’ ಎಂದು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ನಾಯಕಿ ರಾಧಿಕಾ ನಾರಾಯಣ್‍, ಚಿತ್ರದಲ್ಲಿ ಪೊಲೀಸ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅರವಿಂದ ರಾವ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮರಿಗಳೊಂದಿಗೆ ಹುಲಿ ಕಂಡು ಪುಳಕಿತರಾದ ಪ್ರವಾಸಿಗರು

ಮಹೇಂದ್ರ ಹಸಗೂಲಿ ತಾಯಿ ಹುಲಿ ನಾಪತ್ತೆಯಾಗಿದ್ದರಿಂದ ಮರಿಗಳನ್ನು ಪಾಲನೆ ಮಾಡಿದ್ದ ಅರಣ್ಯ ಇಲಾಖೆ  ಗುಂಡ್ಲುಪೇಟೆ: ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು…

1 min ago

ಕೆರೆಗಳಿಗೆ ಪುನಶ್ಚೇತನ; ವನ್ಯಜೀವಿಗಳಿಗಿಲ್ಲ ನೀರಿನ ಕೊರತೆ

ನಾಗರಹೊಳೆ ಅರಣ್ಯದಲ್ಲಿ ಬೇಸಿಗೆಗೂ ಮುನ್ನವೇ ಕೆರೆಗಳ ಅಭಿವೃದ್ಧಿ ಕಾರ್ಯ ಕೈಗೊಂಡ ಅರಣ್ಯ ಇಲಾಖೆ ವೀರನಹೊಸಹಳ್ಳಿ: ಈ ಬಾರಿ ಬೇಸಿಗೆಗೂ ಮುನ್ನವೇ…

4 mins ago

ವಾಣಿಜ್ಯ ಸಿಲಿಂಡರ್ ಅಭಾವ ಶುರು

ದಿನೇಶ್ ಕುಮಾರ್ ಹೆಚ್.ಎಸ್. ಒಂದೆಡೆ ಬೆಲೆ ಏರಿಕೆ ಬಿಸಿ, ಮತ್ತೊಂದೆಡೆ ವಾಣಿಜ್ಯ ಸಿಲಿಂಡರ್ ಕೊರತೆ ಎದುರಾಗುವ ಆತಂಕ ಇರಾನ್‌ನ ಹೊರ್ಮುಜ್…

8 mins ago

ಸಂಧಾನ ಯಶಸ್ವಿ : ಮುಷ್ಕರ ಹಿಂಪಡೆದ ವೈದ್ಯರು

 ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ  (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…

8 hours ago

ಪರಿಷತ್‌ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ : ಜೆಡಿಎಸ್‌ಗೆ 1 ಸೀಟು

ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…

10 hours ago

ಎಲ್‌ಪಿಜಿ ಸಿಲಿಂಡರ್‌ ವ್ಯತ್ಯಯ, ಬೆಲೆ ಏರಿಕೆ : ಬಾಯಿ ಬಿಡದ ಬಿಜೆಪಿ ; ಡಿ.ಕೆ.ಶಿವಕುಮಾರ್‌ ಆರೋಪ

ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…

10 hours ago