ಮನರಂಜನೆ

10 ವರ್ಷಗಳ ನಂತರ ಮತ್ತೆ ‘ರಂಗಿತರಂಗ’; ಜುಲೈ.04ರಂದು ಬಿಡುಗಡೆ

ಅನೂಪ್‍ ಭಂಡಾರಿ ನಿರ್ದೇಶನದ ಮತ್ತು ನಿರೂಪ್‍ ಭಂಡಾರಿ ನಾಯಕನಾಗಿ ನಟಿಸಿದ ‘ರಂಗಿತರಂಗ’ ಚಿತ್ರವು 2015ರ ಜುಲೈ.3ರಂದು ಬಿಡುಗಡೆಯಾಗಿ ಯಶಸ್ವಿಯಾಗಿತ್ತು. ಪರಭಾಷೆಗಳ ದೊಡ್ಡದೊಡ್ಡ ಚಿತ್ರಗಳ ನಡುವೆ ತೆರೆ ಕಂಡಿದ್ದ ಎಚ್.ಕೆ.ಪ್ರಕಾಶ್ ನಿರ್ಮಾಣದ ಈ ಚಿತ್ರ ಯಶಸ್ವಿಯಾಗುವುದರ ಜೊತೆಗೆ, ಹೊಸಬರ ತಂಡವು ಗೆಲ್ಲಬಹುದು ಎಂದು ತೋರಿಸಿಕೊಟ್ಟಿತ್ತು.

ಇದೀಗ ‘ರಂಗಿತರಂಗ’ ಚಿತ್ರವು 10 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿ ಚಿತ್ರವನ್ನು ಮತ್ತೆ ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ಮುಂದಾಗಿದೆ. ಚಿತ್ರವನ್ನು ಜುಲೈ.04ರಂದು ಪುನಃ ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ.

ಈ ಕುರಿತು ಮಾಹಿತಿ ನೀಡಲು ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರತಂಡದ ಸದಸ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡು ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.

ಈ ಚಿತ್ರದ ಕುರಿತು ಮಾತನಾಡಿರುವ ನಿರ್ದೇಶಕ ಅನೂಪ್‍ ಭಂಡಾರಿ, ‘ಕಪಾಲಿ ಚಿತ್ರಮಂದಿರದಲ್ಲಿ ಚಿತ್ರ ನೋಡಿ ಬಂದ ಕೆಲವರು ನಮ್ಮ ನಿರ್ಮಾಪಕರಿಗೆ ‘ನಿಮಗೆ ಪೋಸ್ಟರ್ ಖರ್ಚು ಕೂಡ ಬರುವುದಿಲ್ಲ’ ಎಂದು ಹೆದರಿಸಿದ್ದರು. ಜನ ನಮ್ಮ ಕೈ ಹಿಡಿದರು. ‘ಬಾಹುಬಲಿ’, ‘ಭಜರಂಗಿ ಭಾಯಿಜಾನ್’, ‘ಶ್ರೀಮಂತುಡು’ ನಂತಹ ದೊಡ್ಡ ಚಿತ್ರಗಳ ಜೊತೆ ಬಿಡುಗಡೆಯಾದರೂ ನಮ್ಮ ಕನ್ನಡ ಚಿತ್ರ ಹಿಟ್ ಆಯಿತು. ‘ರಂಗಿತರಂಗ’ದ ಮೂಲಕ ಅಮೆರಿಕದಲ್ಲಿ ಕನ್ನಡಕ್ಕೆ ಒಂದು ಹೊಸ ಮಾರುಕಟ್ಟೆ ಸೃಷ್ಟಿಯಾಯಿತು. ಆ ವರ್ಷದ ಬಹುಪಾಲು ಪ್ರಶಸ್ತಿಗಳನ್ನು ಬಾಚಿಕೊಂಡ ‘ರಂಗಿತರಂಗ’ ಈ ಜುಲೈ.4ರಂದು ಮರು-ಬಿಡುಗಡೆಯಾಗುತ್ತಿದೆ. ಮತ್ತೆ ನಮ್ಮ ಚಿತ್ರವನ್ನು ಕನ್ನಡಿಗರು ಗೆಲ್ಲಿಸುತ್ತಾರೆ ಎಂಬ ಭರವಸೆ ಇದೆ’ ಎಂದರು.

‘ಪೊಲೀಸ್ ಸ್ಟೋರಿ’ ಮತ್ತು ‘ರಂಗಿತರಂಗ’ ಚಿತ್ರಗಳು ನನ್ನ ಎರಡು ಕಣ್ಣುಗಳು ಎಂದ ಹಿರಿಯ ನಟ ಸಾಯಿಕುಮಾರ್‍, ‘ಇಂತಹ ಕನ್ನಡ ಚಿತ್ರಗಳಲ್ಲಿ ನಟಿಸಿದ್ದು ಬಹಳ ಖುಷಿಯಾಗಿದೆ. ಈಗಲೂ ನಾನು ಹೋದ ಕಡೆ ‘ರಂಗಿತರಂಗ’ದ ನನ್ನ ಪಾತ್ರಕ್ಕೆ ಜನ ಮೆಚ್ಚುಗೆ ಸೂಚಿಸುತ್ತಾರೆ. ಚಿತ್ರ ಮರು-ಬಿಡುಗಡೆಯಲ್ಲೂ ದಾಖಲೆ ಬರೆಯಲಿ’ ಎಂದು ಶುಭ ಹಾರೈಸಿದರು.

ಅಣ್ಣನ ಮೊದಲ ಚಿತ್ರಕ್ಕೆ ನಾನೇ ಹೀರೋ ಎಂದಾಗ, ಅದ ಖುಷಿ ಅಷ್ಟಿಷ್ಟಲ್ಲ ಎಂದ ನಿರೂಪ್ ಭಂಡಾರಿ, ‘ನಾನು ಐಟಿ ಉದ್ಯೋಗಿಯಾಗಿದ್ದರೂ ಸಿನಿಮಾ ಮೇಲೆ ಹೆಚ್ಚು ಆಸಕ್ತಿ ಹೊಂದಿದ್ದೆ. ಅಣ್ಣನ ನಿರ್ದೇಶನದ ಕಿರುಚಿತ್ರಗಳಿಗೆ ನಾನೇ ಹೀರೋ. ಬೆಳ್ಳಿತೆರೆಯ ಮೇಲೆ ಅನೂಪ್ ನಿರ್ದೇಶನದ ಮೊದಲ ಚಿತ್ರಕ್ಕೂ ನಾನೇ ನಾಯಕ ಎಂದು ತಿಳಿದಾಗ ಆದ ಖುಷಿ ಅಷ್ಟಿಷ್ಟಲ್ಲ. ಮೊದಲ ದೃಶ್ಯದಲ್ಲೇ ನಾನು ಸಾಯಿಕುಮಾರ್ ಅವರೊಂದಿಗೆ ಫೈಟ್ ಮಾಡಬೇಕಿತ್ತು. ಆಗ ನನಗಾದ ಭಯ ಈಗಲೂ ಕಣ್ಣ ಮುಂದೆ ಇದೆ. ಅಮೆರಿಕಾಗೆ ಹೋದಾಗ ಅಲ್ಲಿ ನಮ್ಮ ಚಿತ್ರವನ್ನು ನೋಡಲು ಬಂದಿದ್ದ ಜನಸಾಗರ ಕಂಡು ಬಹಳ ಖುಷಿಪಟ್ಟಿದ್ದೆ’ ಎಂದು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ನಾಯಕಿ ರಾಧಿಕಾ ನಾರಾಯಣ್‍, ಚಿತ್ರದಲ್ಲಿ ಪೊಲೀಸ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಅರವಿಂದ ರಾವ್ ಮುಂತಾದವರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

49 mins ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

54 mins ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

59 mins ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

3 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

6 hours ago

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

8 hours ago