ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.
ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್ ರೈಟ್ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.
ಶೂಟಿಂಗ್ನ ಬಿಜಿ ಶೆಡ್ಯೂಲ್ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.
ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್ ಬಗ್ ರಿಲೀಫ್ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…
ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…
ಕಲಬುರ್ಗಿ: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಕಲಬುರ್ಗಿ…
ನವದೆಹಲಿ: ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್ ಜಾಮೀನು…
ಚೆನ್ನೈ: ತಮಿಳುನಾಡಿನ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡು ಮಾಜಿ ಸಿಎಂ ದಿವಂಗತ ಜಯಲಲಿತಾ ಅವರ ಮೆಚ್ಚಿನ ಶಿಷ್ಯರಾಗಿದ್ದ ಪನ್ನೀರ್…
ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ…