ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.
ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್ ರೈಟ್ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.
ಶೂಟಿಂಗ್ನ ಬಿಜಿ ಶೆಡ್ಯೂಲ್ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.
ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…