ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.
ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್ ರೈಟ್ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.
ಶೂಟಿಂಗ್ನ ಬಿಜಿ ಶೆಡ್ಯೂಲ್ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.
ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.
೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…
ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್ನ…
ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…
ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…
ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…