ಮನರಂಜನೆ

ಕನ್ನಡತಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು

ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.

ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್‌ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್‌ ರೈಟ್‌ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.

ಶೂಟಿಂಗ್‌ನ ಬಿಜಿ ಶೆಡ್ಯೂಲ್‌ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್‌ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್‌ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

4 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

11 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

11 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

11 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

11 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

11 hours ago