ಮನರಂಜನೆ

ಕನ್ನಡತಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು

ಬೆಂಗಳೂರು: ಹಲವು ಕನ್ನಡ ಧಾರಾವಾಹಿಗಳ ಮೂಲಕ ಖ್ಯಾತಿ ಪಡೆದಿರುವ ನಟಿ ರಂಜಿನಿ ರಾಘವನ್‌ಗೆ ಯುವ ಸಾಹಿತ್ಯ ರತ್ನ ಬಿರುದು ನೀಡಲಾಗಿದೆ.

ಹಲವು ಕನ್ನಡ ಧಾರಾವಾಹಿಗಳ ಮೂಲಕ ಮನೆ ಮಾತಾಗಿರುವ ನಟಿ ರಂಜಿನಿ ರಾಘವನ್‌ ಅವರು, ನಟಿಯ ಜೊತೆ ಜೊತೆಗೆ ಒಳ್ಳೆಯ ಬರಹಗಾರ್ತಿ. ಇವರು ಕತೆಡಬ್ಬಿ ಎಂಬ ಕಥಾಸಂಕಲನ ಮತ್ತು ಸ್ವೈಪ್‌ ರೈಟ್‌ ಎಂಬ ಕಾದಂಬರಿ ಬರೆದು ಸಾಹಿತ್ಯ ಲೋಕದಲ್ಲಿಯೂ ಮಿಂಚುತ್ತಿದ್ದಾರೆ. ರಂಜಿನಿ ಅವರಿಗೆ ಕನ್ನಡದ ಮೇಲೆ ಅತೀ ಹೆಚ್ಚು ಆಸಕ್ತಿ. ಸಾಹಿತ್ಯ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುವ ಮೂಲಕ ಇದನ್ನು ಅವರು ಸಾಬೀತು ಮಾಡಿದ್ದಾರೆ.

ಶೂಟಿಂಗ್‌ನ ಬಿಜಿ ಶೆಡ್ಯೂಲ್‌ ನಡುವೆಯೂ ಪುಸ್ತಕ ಬರೆಯಲು ಟೈಂ ಮಾಡಿಕೊಳ್ಳುತ್ತಾರೆ. ನಟನೆಯಲ್ಲಿ ತೊಡಗಿಸಿಕೊಂಡವರು ಬರವಣಿಗೆ ಬಗ್ಗೆ ಗಮನ ನೀಡೋಕೆ ಸಮಯ ಸಿಗೋದು ಕಡಿಮೆ. ಅದರಲ್ಲೂ ಧಾರಾವಾಹಿ ನಟ-ನಟಿಯರು ಪ್ರತಿ ದಿನ ಶೂಟಿಂಗ್‌ನಲ್ಲೇ ಮುಳುಗಿರುತ್ತಾರೆ. ಅದರ ನಡುವೆಯೂ ಕಥೆ, ಕಾದಂಬರಿ ಬರೆಯಬೇಕು ಎಂದರೆ ಸಮಯ ಹೊಂದಿಸಿಕೊಳ್ಳುವುದು ಸುಲಭದ ಮಾತಲ್ಲ. ಆ ಎಲ್ಲಾ ನೆಪಗಳನ್ನು ಬದಿಗಿಟ್ಟು ನಟಿ ರಂಜಿನಿ ರಾಘವನ್‌ ಅವರು ಲೇಖಕಿಯಾಗಿ ಗುರುತಿಸಿಕೊಂಡಿದ್ದಾರೆ.

ಇದೀಗ ನಟಿಗೆ ಇನ್ನೊಂದು ಹೆಮ್ಮೆಯ ಗರಿ ಮೂಡಿದೆ. ಇವರ ಸಾಹಿತ್ಯ ಪ್ರೇಮವನ್ನು ಗುರುತಿಸಿ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ ಯುವ ಸಾಹಿತ್ಯ ರತ್ನ ಬಿರುದು ನೀಡಿ ಗೌರವಿಸಲಾಗಿದೆ. ಇದನ್ನು ನಟಿ ರಂಜಿನಿ ರಾಘವನ್‌ ತಮ್ಮ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

5 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

5 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

5 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

5 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

6 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago