ಮನರಂಜನೆ

ಶಶಿಕುಮಾರ್ ಮಗನ ಹುಟ್ಟುಹಬ್ಬಕ್ಕೆ ‘ರಾಶಿ’ ಉಡುಗೊರೆ

ಶಶಿಕುಮಾರ್‍ ಅವರ ಮಗ ಆದಿತ್ಯ ಅಭಿನಯದ ‘ಓ ಮೈ ಲವ್‍’, ‘ಕೇವೋಸ್‍’ ಮತ್ತು ‘ಕಾದಾಡಿ’ ಚಿತ್ರಗಳು ಅದ್ಯಾಕೋ ಹೆಚ್ಚು ಸದ್ದು ಮಾಡಲಿಲ್ಲ. ಚಿತ್ರದ ಗೆಲುವು, ಸೋಲು ಅತ್ಲಾಗಿರಲಿ. ಚಿತ್ರ ಬಿಡುಗಡೆಯಾಗಿದ್ದು ಸಹ ಗೊತ್ತಾಗಲಿಲ್ಲ. ಈಗ ಆದಿತ್ಯ ಹಳೆಯದನ್ನು ಮರೆತು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ, ಆದಿತ್ಯ ಶಶಿಕುಮಾರ್‍ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಚಿತ್ರಕ್ಕೆ ‘ರಾಶಿ’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಶೀರ್ಷಿಕೆ ಅನಾವರಣ ಮಾಡಲಾಗಿದೆ.

‘ರಾಶಿ’ ಚಿತ್ರದ ಕಥೆಯೇನು? ಅಥವಾ ತಮ್ಮ ಪಾತ್ರವೇನು? ಎಂಬುದರ ಕುರಿತು ಆದಿತ್ಯ ಹೇಳಲಿಲ್ಲ. ‘ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ’ ಎಂದರು.

ನಿರ್ದೇಶಕ ವಿಜಯ್‍ ಪಾಳೇಗಾರ್‍ ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಕರೆದು ಈ ಚಿತ್ರವನ್ನು ನಿರ್ದೇಶಿಸಿಕೊಡಬೇಕೆಂದರಂತೆ. ಇದಕ್ಕೂ ಮೊದಲು ಅವರು ‘ಟ್ರಿಗರ್‍’ ಎಂಬ ಚಿತ್ರ ಮಾಡಿದ್ದ ವಿಜಯ್‍ಗೆ ಇದು ಎರಡನೇ ಚಿತ್ರ. ‘ಅಖಿಲೇಶ್ ಅವರೇ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣವಿದೆ’ ಎಂದರು.

ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಚಿತ್ರಕ್ಕೆ ಫೋಟೋಶೂಟ್‍ ಮಾತ್ರ ಆಗಿದ್ದು, ಚಿತ್ರೀಕರಣ ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಪ್ರೇಮಿಗಳ ದಿನಾಚರಣೆಗೆ : ನಂದಿ ಬೆಟ್ಟಕ್ಕೆ ಪ್ರವೇಶ ನಿಷೇಧ

ಚಿಕ್ಕಬಳ್ಳಾಪುರ : ಬೆಂಗಳೂರಿನ ಸಮೀಪದ ಅತ್ಯಂತ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಗೆ ಫೆಬ್ರವರಿ 14 ರಂದು ಪ್ರೇಮಿಗಳ ದಿನ…

1 hour ago

ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಅಳವಡಿಕೆ : ಫೆ.28 ಗಡುವು

ಬೆಂಗಳೂರು : ಪ್ರಯಾಣಿಕರ ಸುರಕ್ಷತೆ ಹಿನ್ನೆಲೆಯಲ್ಲಿ ಎಲ್ಲಾ ಸ್ಲೀಪರ್ ಕೋಚ್ ಮತ್ತು ಅಖಿಲ ಭಾರತ ಪ್ರವಾಸಿ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತಾ…

1 hour ago

ಮ.ಬೆಟ್ಟದಲ್ಲಿ ಭೀಕರ ಬಸ್‌ ಅಪಘಾತ : 20ಕ್ಕೂ ಹೆಚ್ಚು ಮಂದಿ ಗಂಭೀರ

ಚಾಮರಾಜನಗರ : ಮಲೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆಯ ಹೊತ್ತಲ್ಲೇ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು…

2 hours ago

ವಿದ್ಯಾರ್ಥಿಗಳ ಶಾಲಾ ಪ್ರವಾಸದಲ್ಲಿ ಸುರಕ್ಷತೆಗೆ ಆದ್ಯತೆ : ಸಚಿವ ಮಧು ಬಂಗಾರಪ್ಪ ಭರವಸೆ

ಬೆಂಗಳೂರು : ಶಾಲಾ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆದೊಯ್ಯುವ ಮುನ್ನ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

3 hours ago

AUS vs ZIM : ಬಲಿಷ್ಠ ಆಸ್ಟ್ರೇಲಿಯಾಕ್ಕೆ ಸೋಲಿನ ರುಚಿ ತೋರಿಸಿದ ಜಿಂಬಾಬ್ವೆ:

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಗ್ರೂಪ್ ಬಿ ಪಂದ್ಯದಲ್ಲಿ ಜಿಂಬಾಬ್ವೆ ತಂಡವು ಆಸ್ಟ್ರೇಲಿಯಾದ ವಿರುದ್ಧ ಅದ್ಭುತ…

3 hours ago

ಜ್ಯೋತಿಷಿ ಮಾತು ಕೇಳಿ ಹೆತ್ತ ತಾಯಿಯನ್ನೇ ಕೊಂದ ಮಗಳು !

ತುಮಕೂರು : ಜ್ಯೋತಿಷಿಯ ಮಾತು ನಂಬಿ ಮಗಳು ತಾಯಿಯನ್ನೇ ಕೊಲೆ‌ ಮಾಡಿರುವ ಘಟನೆ ತುಮಕೂರು ತಾಲೂಕಿನ ಅನುಪನಹಳ್ಳಿಯಲ್ಲಿ ನಡೆದಿದೆ. ಪುಷ್ಪಲತಾ…

4 hours ago