ಮನರಂಜನೆ

ಶಶಿಕುಮಾರ್ ಮಗನ ಹುಟ್ಟುಹಬ್ಬಕ್ಕೆ ‘ರಾಶಿ’ ಉಡುಗೊರೆ

ಶಶಿಕುಮಾರ್‍ ಅವರ ಮಗ ಆದಿತ್ಯ ಅಭಿನಯದ ‘ಓ ಮೈ ಲವ್‍’, ‘ಕೇವೋಸ್‍’ ಮತ್ತು ‘ಕಾದಾಡಿ’ ಚಿತ್ರಗಳು ಅದ್ಯಾಕೋ ಹೆಚ್ಚು ಸದ್ದು ಮಾಡಲಿಲ್ಲ. ಚಿತ್ರದ ಗೆಲುವು, ಸೋಲು ಅತ್ಲಾಗಿರಲಿ. ಚಿತ್ರ ಬಿಡುಗಡೆಯಾಗಿದ್ದು ಸಹ ಗೊತ್ತಾಗಲಿಲ್ಲ. ಈಗ ಆದಿತ್ಯ ಹಳೆಯದನ್ನು ಮರೆತು ಹೊಸ ಚಿತ್ರವನ್ನು ಒಪ್ಪಿಕೊಂಡಿದ್ದಾರೆ.

ಧುವನ್ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ವಿಜಯ್ ಪಾಳೇಗಾರ್ ನಿರ್ದೇಶಿಸುತ್ತಿರುವ, ಆದಿತ್ಯ ಶಶಿಕುಮಾರ್‍ ನಟಿಸುತ್ತಿರುವ ಹೊಸ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಚಿತ್ರಕ್ಕೆ ‘ರಾಶಿ’ ಎಂದು ಹೆಸರಿಡಲಾಗಿದ್ದು, ಇತ್ತೀಚೆಗೆ ಶೀರ್ಷಿಕೆ ಅನಾವರಣ ಮಾಡಲಾಗಿದೆ.

‘ರಾಶಿ’ ಚಿತ್ರದ ಕಥೆಯೇನು? ಅಥವಾ ತಮ್ಮ ಪಾತ್ರವೇನು? ಎಂಬುದರ ಕುರಿತು ಆದಿತ್ಯ ಹೇಳಲಿಲ್ಲ. ‘ಈ ಚಿತ್ರದ ಕಥೆ ಬಹಳ ಚೆನ್ನಾಗಿದೆ. ನನ್ನ ಹುಟ್ಟುಹಬ್ಬದ ದಿನ ಈ ಚಿತ್ರದ ಶೀರ್ಷಿಕೆ ಅನಾವರಣವಾಗಿದ್ದು ಖುಷಿಯಾಗಿದೆ. ಇಷ್ಟು ದಿನ ಅಕ್ಷಿತ್ ಶಶಿಕುಮಾರ್ ಆಗಿದ್ದ ನಾನು, ಈಗ ಆದಿತ್ಯ ಶಶಿಕುಮಾರ್ ಎಂದು ಹೆಸರು ಬದಲಿಸಿಕೊಂಡಿದ್ದೇನೆ. ಇನ್ನು ಮುಂದೆ ಎಲ್ಲರೂ ಆದಿತ್ಯ ಶಶಿಕುಮಾರ್ ಎಂದೇ ಕರೆಯಬೇಕೆಂದು ವಿನಂತಿಸುತ್ತೇನೆ’ ಎಂದರು.

ನಿರ್ದೇಶಕ ವಿಜಯ್‍ ಪಾಳೇಗಾರ್‍ ಮಂತ್ರಾಲಯದಲ್ಲಿ ರಾಯರ ದರ್ಶನ ಮುಗಿಸಿಕೊಂಡು ಬರುವಾಗ ನಿರ್ಮಾಪಕ ಅಖಿಲೇಶ್ ಕರೆದು ಈ ಚಿತ್ರವನ್ನು ನಿರ್ದೇಶಿಸಿಕೊಡಬೇಕೆಂದರಂತೆ. ಇದಕ್ಕೂ ಮೊದಲು ಅವರು ‘ಟ್ರಿಗರ್‍’ ಎಂಬ ಚಿತ್ರ ಮಾಡಿದ್ದ ವಿಜಯ್‍ಗೆ ಇದು ಎರಡನೇ ಚಿತ್ರ. ‘ಅಖಿಲೇಶ್ ಅವರೇ ಈ ಚಿತ್ರದ ಕಥೆ ಬರೆದಿದ್ದಾರೆ. ನಾನು ಚಿತ್ರಕಥೆ, ಬರೆದು, ಗೀತರಚನೆ ಮಾಡಿ, ಸಂಗೀತ ನಿರ್ದೇಶನದೊಂದಿಗೆ ನಿರ್ದೇಶನನ್ನು ಮಾಡುತ್ತಿದ್ದೇನೆ. ಇನ್ನು ಈ ಚಿತ್ರಕ್ಕೆ ಅಭಿನಂದನ್ ದೇಶಪ್ರಿಯ ಸಂಭಾಷಣೆ, ನವೀನ್ ಸೂರ್ಯ ಛಾಯಾಗ್ರಹಣವಿದೆ’ ಎಂದರು.

ಇತ್ತೀಚಿಗೆ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆದಿದೆ. ಚಿತ್ರಕ್ಕೆ ಫೋಟೋಶೂಟ್‍ ಮಾತ್ರ ಆಗಿದ್ದು, ಚಿತ್ರೀಕರಣ ಇನ್ನಷ್ಟೇ ಪ್ರಾರಂಭವಾಗಬೇಕಿದೆ.

ಆಂದೋಲನ ಡೆಸ್ಕ್

Recent Posts

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

5 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

6 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

6 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

6 hours ago

ಏಪ್ರಿಲ್.‌17ರಂದು ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲೆಗೆ ಭೇಟಿ ಸಾಧ್ಯತೆ

ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.‌17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…

6 hours ago

ಇರಾನ್‌ಗೆ ಇಸ್ರೇಲ್‌ ಖಡಕ್‌ ಎಚ್ಚರಿಕೆ: ಏನದು ಗೊತ್ತಾ.?

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್‌ ಈಗ ಇರಾನ್‌ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…

6 hours ago