ಮನರಂಜನೆ

ಕೊಡವ ಕಮ್ಯುನಿಟಿಯಿಂದ ಇಂಡಸ್ಟ್ರಿಗೆ ಬಂದಿದ್ದು ನಾನೇ ಫಸ್ಟ್:‌ ರಶ್ಮಿಕಾ ಮಂದಣ್ಣ ಯಡವಟ್ಟು

ಬೆಂಗಳೂರು: ನಟಿ ರಶ್ಮಿಕಾ ಸಿನಿಮಾಗಳ ಜೊತೆ ಜೊತೆ ವಿವಾದಾತ್ಮಕ ಹೇಳಿಕೆಗಳಿಂದಲೇ ಆಗಾಗ ಟೀಕೆಗೆ ಗುರಿಯಾಗುತ್ತಲೇ ಇದ್ದಾರೆ. ಈ ಬಾರಿ ತಮ್ಮದೇ ಕೊಡವ ಸಮುದಾಯದ ಇತಿಹಾಸದ ಬಗ್ಗೆ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಹೇಳಿಕೆ ವಿವಾದ ಹುಟ್ಟುಹಾಕಿದ್ದು, ಚಿತ್ರರಂಗದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

2017ರಲ್ಲಿ ರಕ್ಷಿತ್ ಶೆಟ್ಟಿ ಜೊತೆಗಿನ ನಿಶ್ಚಿತಾರ್ಥ ಮುರಿದುಬಿದ್ದ ಮೇಲೆ ತೆಲುಗು ಇಂಡಸ್ಟ್ರಿಗೆ ಹೋದ ಮೇಲೆ ಅಲ್ಲಿ ಹಿಟ್ ಚಿತ್ರಗಳನ್ನು ನೀಡುತ್ತಾ ಕನ್ನಡ ಬಗ್ಗೆ ನೀಡಿದ ಕೆಲವು ಹೇಳಿಕೆಗಳಿಂದ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇಂದು ರಶ್ಮಿಕಾ ಮಂದಣ್ಣ ಭಾರತೀಯ ಚಿತ್ರರಂಗದ ನಟಿಯರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಮಟ್ಟಿಗೆ ಬೆಳೆದಿದ್ದಾರೆ. ತೆಲುಗು, ತಮಿಳು, ಬಾಲಿವುಡ್ ನಲ್ಲಿ ನಟಿಸಿದ ಅನೇಕ ಚಿತ್ರಗಳು ಗೆದ್ದಿವೆ. ನ್ಯಾಶನಲ್ ಕ್ರಶ್ ಎಂದು ಅಭಿಮಾನಿಗಳು ಅವರನ್ನು ಪ್ರೀತಿಯಿಂದ ಕರೆಯುತ್ತಾರೆ.

ಸಂದರ್ಶನದಲ್ಲಿ ಮಾತನಾಡಿರುವ ರಶ್ಮಿಕಾ ಮಂದಣ್ಣ, `ನಮ್ಮ ಕೊಡವ ಸಮುದಾಯದಿಂದ ಯಾರೂ ಚಿತ್ರರಂಗಕ್ಕೆ ಬರಲಿಲ್ಲ. ಬಹುಶಃ ನಮ್ಮ ಸಮುದಾಯದಿಂದ ಚಿತ್ರರಂಗಕ್ಕೆ ಬಂದವಳು ನಾನೊಬ್ಬಳೇ. ನಮ್ಮ ಸಮುದಾಯದವರು ತುಂಬಾನೇ ಜಡ್ಜ್ ಮಾಡುತ್ತಾರೆ. ನಾನು ಆಡಿಷನ್ ಮಾಡುತ್ತೇನೆ ಎಂದು ನನ್ನ ಕುಟುಂಬದವರಿಗೆ ಹೇಳಿರಲಿಲ್ಲ. ಸಿನಿಮಾ ರಂಗಕ್ಕೆ ಹೋಗುತ್ತೇನೆ ಎಂದು ಕೂಡ ಅವರಿಗೆ ತಿಳಿಸಿರಲಿಲ್ಲ’ ಎಂದು ಹೇಳಿದ್ದಾರೆ.

ಸದ್ಯ ರಶ್ಮಿಕಾ ಹೇಳಿಕೆಗೆ ಸಾಕಷ್ಟು ಟೀಕೆಗಳು ವ್ಯಕ್ತವಾಗಿದೆ. ಭಾರತ ಚಿತ್ರರಂಗದಲ್ಲಿ ತುಂಬಾನೇ ಖ್ಯಾತಿ ಪಡೆದಿರೋ ಪ್ರೇಮಾ ಅವರು ಕೂಡ ಕೊಡವ ಸಮುದಾಯದವರೇ. ಅವರು ಗಳಿಸಿದ ಖ್ಯಾತಿ ತುಂಬಾನೇ ದೊಡ್ಡದು. ರಶ್ಮಿಕಾ ಹುಟ್ಟುವಾಗ ಪ್ರೇಮಾ ಅವರು ಚಿತ್ರರಂಗಕ್ಕೆ ಬಂದು ಒಂದು ವರ್ಷ ಕಳೆದಿತ್ತು. ಅವರ ಬಗ್ಗೆ ರಶ್ಮಿಕಾಗೆ ಗೊತ್ತಿಲ್ಲ ಅನ್ನೋದು ಹಾಸ್ಯಾಸ್ಪದ ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

8 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

8 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

10 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

10 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

10 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

11 hours ago