ಮನರಂಜನೆ

ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ; ‘ಮೈಸಾ’ ಪ್ಯಾನ್‍ ಇಂಡಿಯಾ ಚಿತ್ರಕ್ಕೆ ಚಾಲನೆ

ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದ ಮುಹೂರ್ತ ಸಮಾರಂಭ ಭಾನುವಾರ ನಡೆದಿದ್ದು, ಚಿತ್ರಕ್ಕೆ ಚಾಲನೆ ಸಿಕ್ಕಿದೆ. ತೆಲುಗಿನ ಖ್ಯಾತ ನಿರ್ಮಾಪಕ ಸುರೇಶ್‍ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಶ್ಮಿಕಾ ಬುಡಕಟ್ಟು ಮಹಿಳೆಯರೊಂದಿಗೆ ಗೋಂಡ್ ಹಾಡಿಗೆ ಡಾನ್ಸ್ ಮಾಡಿ ಸಂಭ್ರಮಿಸಿದರು. ಭಾನುವಾರ ಚಿತ್ರದ ಮುಹೂರ್ತವಾಗಿದ್ದು, ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರಾವತಾರ ತಾಳಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಪೋಸ್ಟರ್‍ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್‍ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್‍ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್‍, ಹಿಂದಿಯಲ್ಲಿ ವಿಕ್ಕಿ ಕೌಶಾಲ್‍ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್‍ ಸಲ್ಮಾನ್‍ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ರಶ್ಮಿಕಾ ಅಭಿನಯದ ‘ಛಾವಾ’, ‘ಕುಬೇರ’ ಮತ್ತು ‘ಸಿಕಂದರ್‍’ ಚಿತ್ರಗಳು ಈ ವರ್ಷ ಈಗಾಗಲೇ ಬಿಡುಗಡೆಯಾಗಿವೆ. ‘ದಿ ಗರ್ಲ್‍ಫ್ರೆಂಡ್‍’ ಮತ್ತು ‘ತಮಾ’ ಚಿತ್ರಗಳು ಬಿಡುಗಡೆಯಾಗಬೇಕಿದ್ದು, ‘ಮೈಸಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

5 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

5 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

16 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

16 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

16 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

16 hours ago