ಮನರಂಜನೆ

ಹೊಸ ಅವತಾರದಲ್ಲಿ ರಶ್ಮಿಕಾ ಮಂದಣ್ಣ; ‘ಮೈಸಾ’ ಪ್ಯಾನ್‍ ಇಂಡಿಯಾ ಚಿತ್ರಕ್ಕೆ ಚಾಲನೆ

ರಶ್ಮಿಕಾ ಮಂದಣ್ಣ ಚಿತ್ರದಿಂದ ಚಿತ್ರಕ್ಕೆ ವಿವಿಧ ಪಾತ್ರಗಳನ್ನು ಮಾಡುತ್ತಿದ್ದಾರೆ. ಈಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದಲ್ಲಿ ಅವರು ಗೊಂಡಾ ಬುಡಕಟ್ಟು ಮಹಿಳೆಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಇದೆ. ‘ಮೈಸಾ’ ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

ಈ ಚಿತ್ರದ ಮುಹೂರ್ತ ಸಮಾರಂಭ ಭಾನುವಾರ ನಡೆದಿದ್ದು, ಚಿತ್ರಕ್ಕೆ ಚಾಲನೆ ಸಿಕ್ಕಿದೆ. ತೆಲುಗಿನ ಖ್ಯಾತ ನಿರ್ಮಾಪಕ ಸುರೇಶ್‍ ಚಿತ್ರದ ಮೊದಲ ದೃಶ್ಯಕ್ಕೆ ಕ್ಲಾಪ್‍ ಮಾಡಿದ್ದಾರೆ. ಈ ಸಂದರ್ಭದಲ್ಲಿ ರಶ್ಮಿಕಾ ಬುಡಕಟ್ಟು ಮಹಿಳೆಯರೊಂದಿಗೆ ಗೋಂಡ್ ಹಾಡಿಗೆ ಡಾನ್ಸ್ ಮಾಡಿ ಸಂಭ್ರಮಿಸಿದರು. ಭಾನುವಾರ ಚಿತ್ರದ ಮುಹೂರ್ತವಾಗಿದ್ದು, ಇಂದಿನಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರಾವತಾರ ತಾಳಿದ್ದಾರೆ.

ಇತ್ತೀಚೆಗೆ ಈ ಚಿತ್ರದ ಪೋಸ್ಟರ್‍ ಬಿಡುಗಡೆಯಾಗಿದ್ದು, ವಿಶೇಷವೆಂದರೆ ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್‍ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್‍ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್‍, ಹಿಂದಿಯಲ್ಲಿ ವಿಕ್ಕಿ ಕೌಶಾಲ್‍ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್‍ ಸಲ್ಮಾನ್‍ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭಹಾರೈಸಿದ್ದಾರೆ.

ರಶ್ಮಿಕಾ ಅಭಿನಯದ ‘ಛಾವಾ’, ‘ಕುಬೇರ’ ಮತ್ತು ‘ಸಿಕಂದರ್‍’ ಚಿತ್ರಗಳು ಈ ವರ್ಷ ಈಗಾಗಲೇ ಬಿಡುಗಡೆಯಾಗಿವೆ. ‘ದಿ ಗರ್ಲ್‍ಫ್ರೆಂಡ್‍’ ಮತ್ತು ‘ತಮಾ’ ಚಿತ್ರಗಳು ಬಿಡುಗಡೆಯಾಗಬೇಕಿದ್ದು, ‘ಮೈಸಾ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಿದೆ.

ಆಂದೋಲನ ಡೆಸ್ಕ್

Recent Posts

ವಡ್ಡರದೊಡ್ಡಿ ಮನೆಯೊಂದರಲ್ಲಿ ಕಳ್ಳತನ

ಹನೂರು: ತಾಲ್ಲೂಕಿನ ಮಾರ್ಟಳ್ಳಿ ಸಮೀಪದ ವಡ್ಡರದೊಡ್ಡಿ ಗ್ರಾಮದಲ್ಲಿ ಮನೆಯೊಂದರಲ್ಲಿ ಕಳ್ಳತನ ನಡೆದಿರುವ ಕುರಿತು ವರದಿಯಾಗಿದೆ. ಗ್ರಾಮದ ನಿವಾಸಿ ಸೆಲ್ವಂ ಅವರು…

10 hours ago

ಕೇಂದ್ರ ಸಚಿವ ಜಾರ್ಜ್ ಕುರಿಯನ್ ರಾಜೀನಾಮೆ

ಹೊಸದಿಲ್ಲಿ: ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಕೇಂದ್ರ ಸಚಿವ ಸಂಪುಟಕ್ಕೆ ರಾಜೀನಾಮೆ ನೀಡಿದ್ದಾರೆ. ರಾಷ್ಟ್ರಪತಿ…

11 hours ago

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

12 hours ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

12 hours ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

13 hours ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

15 hours ago