ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್ ಟ್ರೇಡಿಷನಲ್ ಆಗಿ ಕಾಣಿಸಿಕೊಂಡಿರುವ ಅವರು, ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಈ ಬಗ್ಗೆ ಕೊಡವ ಶೈಲಿಯಲ್ಲಿ ಉಡುಗೆ ತೊಟ್ಟು, ತುಂಟನೆಯ ನಗೆಯೊಂದಿಗೆ ಮಾತನಾಡಿರುವ ಅವರು, ತಮ್ಮ ಮೇಲಿರುವ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ” ಎಲ್ಲರಿಗೂ ನಮಸ್ಕಾರ, ನಾನಿಲ್ಲಿ ಕೊಡಗಿಗೆ ಫ್ರೆಂಡ್ ಮದುವೆಗೆ ಬಂದಿದ್ದೇನೆ. ಕೊಡವ ಭಾಷೆಯಲ್ಲಿ ನಿಮ್ಮೊಡನೆ ಮಾತನಾಡಲು ಬಹಳ ಸಂತಸವಾಗುತ್ತದೆ. ಹಾಗಾಗಿ ಕೊಡಗಿನಲ್ಲಿ ಮಾತನಾಡುತ್ತಿದ್ದೇನೆ. ಕಾವೇರಮ್ಮ ಮತ್ತು ಇಗ್ಗುತಪ್ಪ ಆಶೀರ್ವಾದದಿಂದ ನಾನು ಮುಂದುವರೆಯುತ್ತಿದ್ದೇನೆ. ಹಾಗೂ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ. ಮುಂದೆಯೂ ನೀವೆಲ್ಲರೂ ನನಗೆ ಸಪೋರ್ಟ್ ಮಾಡುತ್ತೀರಾ ಎಂದು ಭಾವಿಸಿದ್ದೇನೆ. ಇನ್ನಷ್ಟು ಹಾರ್ಡ್ ವರ್ಕ್ ಮಾಡುವ ಮೂಲಕ ಮುಂದೆ ಮತ್ತಷ್ಟು ಸಾಧಿಸುತ್ತೇನೆ. ನಿವೆಲ್ಲರೂ ಸದಾ ನನ್ನ ಮನಸ್ಸಿನಲ್ಲಿರುತ್ತೀರಾ” ಎಂದು ಹೇಳಿಕೊಂಡಿದ್ದಾರೆ.
ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ರಶ್ಮಿಕಾ ಅವರು, ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂದಿನ ಪ್ಯಾನ್ ಇಂಡಿಯಾ ಪುಷ್ಟ ಇದೇ ಡಿಸೆಂಬರ್ಗೆ ತೆರೆಕಾಣಲಿದೆ.
https://www.instagram.com/reel/C84UfGoIhTx/?igsh=MWI3NnJjMXptdWFkOA==
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…