ಮನರಂಜನೆ

ಕೊಡವ ಭಾಷೆಯಲ್ಲಿ ರಶ್ಮಿಕಾ ಮಾತು: ಏನೇಳಿದ್ರು ಗೊತ್ತಾ ಫ್ಯಾನ್ಸ್‌ಗೆ?

ನ್ಯಾಷನಲ್‌ ಕ್ರಷ್‌ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ.

ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್‌ ಟ್ರೇಡಿಷನಲ್‌ ಆಗಿ ಕಾಣಿಸಿಕೊಂಡಿರುವ ಅವರು, ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.

ಈ ಬಗ್ಗೆ ಕೊಡವ ಶೈಲಿಯಲ್ಲಿ ಉಡುಗೆ ತೊಟ್ಟು, ತುಂಟನೆಯ ನಗೆಯೊಂದಿಗೆ ಮಾತನಾಡಿರುವ ಅವರು, ತಮ್ಮ ಮೇಲಿರುವ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ” ಎಲ್ಲರಿಗೂ ನಮಸ್ಕಾರ, ನಾನಿಲ್ಲಿ ಕೊಡಗಿಗೆ ಫ್ರೆಂಡ್‌ ಮದುವೆಗೆ ಬಂದಿದ್ದೇನೆ. ಕೊಡವ ಭಾಷೆಯಲ್ಲಿ ನಿಮ್ಮೊಡನೆ ಮಾತನಾಡಲು ಬಹಳ ಸಂತಸವಾಗುತ್ತದೆ. ಹಾಗಾಗಿ ಕೊಡಗಿನಲ್ಲಿ ಮಾತನಾಡುತ್ತಿದ್ದೇನೆ. ಕಾವೇರಮ್ಮ ಮತ್ತು ಇಗ್ಗುತಪ್ಪ ಆಶೀರ್ವಾದದಿಂದ ನಾನು ಮುಂದುವರೆಯುತ್ತಿದ್ದೇನೆ. ಹಾಗೂ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ. ಮುಂದೆಯೂ ನೀವೆಲ್ಲರೂ ನನಗೆ ಸಪೋರ್ಟ್‌ ಮಾಡುತ್ತೀರಾ ಎಂದು ಭಾವಿಸಿದ್ದೇನೆ. ಇನ್ನಷ್ಟು ಹಾರ್ಡ್‌ ವರ್ಕ್‌ ಮಾಡುವ ಮೂಲಕ ಮುಂದೆ ಮತ್ತಷ್ಟು ಸಾಧಿಸುತ್ತೇನೆ. ನಿವೆಲ್ಲರೂ ಸದಾ ನನ್ನ ಮನಸ್ಸಿನಲ್ಲಿರುತ್ತೀರಾ” ಎಂದು ಹೇಳಿಕೊಂಡಿದ್ದಾರೆ.

ಸದ್ಯ ಬಾಲಿವುಡ್‌, ಟಾಲಿವುಡ್‌ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ರಶ್ಮಿಕಾ ಅವರು, ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂದಿನ ಪ್ಯಾನ್‌ ಇಂಡಿಯಾ ಪುಷ್ಟ ಇದೇ ಡಿಸೆಂಬರ್‌ಗೆ ತೆರೆಕಾಣಲಿದೆ.

https://www.instagram.com/reel/C84UfGoIhTx/?igsh=MWI3NnJjMXptdWFkOA==

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

25 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

31 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

40 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago