ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್ ಟ್ರೇಡಿಷನಲ್ ಆಗಿ ಕಾಣಿಸಿಕೊಂಡಿರುವ ಅವರು, ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಈ ಬಗ್ಗೆ ಕೊಡವ ಶೈಲಿಯಲ್ಲಿ ಉಡುಗೆ ತೊಟ್ಟು, ತುಂಟನೆಯ ನಗೆಯೊಂದಿಗೆ ಮಾತನಾಡಿರುವ ಅವರು, ತಮ್ಮ ಮೇಲಿರುವ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ” ಎಲ್ಲರಿಗೂ ನಮಸ್ಕಾರ, ನಾನಿಲ್ಲಿ ಕೊಡಗಿಗೆ ಫ್ರೆಂಡ್ ಮದುವೆಗೆ ಬಂದಿದ್ದೇನೆ. ಕೊಡವ ಭಾಷೆಯಲ್ಲಿ ನಿಮ್ಮೊಡನೆ ಮಾತನಾಡಲು ಬಹಳ ಸಂತಸವಾಗುತ್ತದೆ. ಹಾಗಾಗಿ ಕೊಡಗಿನಲ್ಲಿ ಮಾತನಾಡುತ್ತಿದ್ದೇನೆ. ಕಾವೇರಮ್ಮ ಮತ್ತು ಇಗ್ಗುತಪ್ಪ ಆಶೀರ್ವಾದದಿಂದ ನಾನು ಮುಂದುವರೆಯುತ್ತಿದ್ದೇನೆ. ಹಾಗೂ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ. ಮುಂದೆಯೂ ನೀವೆಲ್ಲರೂ ನನಗೆ ಸಪೋರ್ಟ್ ಮಾಡುತ್ತೀರಾ ಎಂದು ಭಾವಿಸಿದ್ದೇನೆ. ಇನ್ನಷ್ಟು ಹಾರ್ಡ್ ವರ್ಕ್ ಮಾಡುವ ಮೂಲಕ ಮುಂದೆ ಮತ್ತಷ್ಟು ಸಾಧಿಸುತ್ತೇನೆ. ನಿವೆಲ್ಲರೂ ಸದಾ ನನ್ನ ಮನಸ್ಸಿನಲ್ಲಿರುತ್ತೀರಾ” ಎಂದು ಹೇಳಿಕೊಂಡಿದ್ದಾರೆ.
ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ರಶ್ಮಿಕಾ ಅವರು, ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂದಿನ ಪ್ಯಾನ್ ಇಂಡಿಯಾ ಪುಷ್ಟ ಇದೇ ಡಿಸೆಂಬರ್ಗೆ ತೆರೆಕಾಣಲಿದೆ.
https://www.instagram.com/reel/C84UfGoIhTx/?igsh=MWI3NnJjMXptdWFkOA==
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…