ನ್ಯಾಷನಲ್ ಕ್ರಷ್ ರಶ್ಮಿಕಾ ಮಂದಣ್ಣ ಅವರು ಇದೇ ಮೊದಲ ಬಾರಿಗೆ ತಮ್ಮ ಅಭಿಮಾನಿಗಳಿಗೆ ಕೊಡವ ಭಾಷೆಯಲ್ಲಿ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಮೂಲತಃ ಕೊಡಗಿನವರಾದ ಅವರು ತಮ್ಮ ಸ್ನೇಹಿತರ ಮದುವೆಗಾಗಿ ಕೊಡಗಿಗೆ ಆಗಮಿಸಿದ್ದರು. ಇದೇ ವೇಳೆ ಕೊಡಗಿನ ಸಂಸ್ಕೃತಿ ಉಡುಗೆ ತೊಟ್ಟು ಸಖತ್ ಟ್ರೇಡಿಷನಲ್ ಆಗಿ ಕಾಣಿಸಿಕೊಂಡಿರುವ ಅವರು, ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ಕಳುಹಿಸಿದ್ದಾರೆ.
ಈ ಬಗ್ಗೆ ಕೊಡವ ಶೈಲಿಯಲ್ಲಿ ಉಡುಗೆ ತೊಟ್ಟು, ತುಂಟನೆಯ ನಗೆಯೊಂದಿಗೆ ಮಾತನಾಡಿರುವ ಅವರು, ತಮ್ಮ ಮೇಲಿರುವ ಪ್ರೀತಿಗೆ ತಾವು ಸದಾ ಋಣಿಯಾಗಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ಇನ್ಸ್ಟಾಗ್ರಾಂ ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು, ” ಎಲ್ಲರಿಗೂ ನಮಸ್ಕಾರ, ನಾನಿಲ್ಲಿ ಕೊಡಗಿಗೆ ಫ್ರೆಂಡ್ ಮದುವೆಗೆ ಬಂದಿದ್ದೇನೆ. ಕೊಡವ ಭಾಷೆಯಲ್ಲಿ ನಿಮ್ಮೊಡನೆ ಮಾತನಾಡಲು ಬಹಳ ಸಂತಸವಾಗುತ್ತದೆ. ಹಾಗಾಗಿ ಕೊಡಗಿನಲ್ಲಿ ಮಾತನಾಡುತ್ತಿದ್ದೇನೆ. ಕಾವೇರಮ್ಮ ಮತ್ತು ಇಗ್ಗುತಪ್ಪ ಆಶೀರ್ವಾದದಿಂದ ನಾನು ಮುಂದುವರೆಯುತ್ತಿದ್ದೇನೆ. ಹಾಗೂ ನಿಮ್ಮೆಲ್ಲರ ಆಶೀರ್ವಾದದಿಂದ ಇಲ್ಲಿಯವರೆಗೆ ಬಂದಿದ್ದೇನೆ. ಮುಂದೆಯೂ ನೀವೆಲ್ಲರೂ ನನಗೆ ಸಪೋರ್ಟ್ ಮಾಡುತ್ತೀರಾ ಎಂದು ಭಾವಿಸಿದ್ದೇನೆ. ಇನ್ನಷ್ಟು ಹಾರ್ಡ್ ವರ್ಕ್ ಮಾಡುವ ಮೂಲಕ ಮುಂದೆ ಮತ್ತಷ್ಟು ಸಾಧಿಸುತ್ತೇನೆ. ನಿವೆಲ್ಲರೂ ಸದಾ ನನ್ನ ಮನಸ್ಸಿನಲ್ಲಿರುತ್ತೀರಾ” ಎಂದು ಹೇಳಿಕೊಂಡಿದ್ದಾರೆ.
ಸದ್ಯ ಬಾಲಿವುಡ್, ಟಾಲಿವುಡ್ ಸಿನಿಮಾಗಳಲ್ಲಿ ಬ್ಯೂಸಿಯಾಗಿರುವ ರಶ್ಮಿಕಾ ಅವರು, ಹಲವಾರು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರ ಮುಂದಿನ ಪ್ಯಾನ್ ಇಂಡಿಯಾ ಪುಷ್ಟ ಇದೇ ಡಿಸೆಂಬರ್ಗೆ ತೆರೆಕಾಣಲಿದೆ.
https://www.instagram.com/reel/C84UfGoIhTx/?igsh=MWI3NnJjMXptdWFkOA==
ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…
ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…
ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…
ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…
ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…