ಮನರಂಜನೆ

‘ಮೈಸಾ’ ಚಿತ್ರದಲ್ಲಿ ಉಗ್ರಾವತಾರ ತಾಳಿದ ರಶ್ಮಿಕಾ ಮಂದಣ್ಣ …

ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್‍ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.

‘ಮೈಸಾ’ ಚಿತ್ರದ ಘೋಷಣೆ ಇತ್ತೀಚೆಗೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಆಗಿದೆ. ವಿಶೇಷವೆಂದರೆ, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್‍ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್, ಹಿಂದಿಯಲ್ಲಿ ವಿಕ್ಕಿ ಕೌಶಾಲ್‍ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್ ಸಲ್ಮಾನ್‍ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರವಾತಾರ ತಾಳಿರುವುದು ವಿಶೇಷ. ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರವೀಂದ್ರ, ‘ಸುಮಾರು ಎರಡು ವರ್ಷಗಳ ಪರಿಶ್ರಮದಿಂದ ಈ ಕಥೆ ರೂಪುಗೊಂಡಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದು ಹೇಳಿದ್ದಾರೆ.

ಇದಲ್ಲದೆ, ತೆಲುಗಿನಲ್ಲಿ ‘ದಿ ಗರ್ಲ್‍ಫ್ರೆಂಡ್‍’ ಮತ್ತು ಹಿಂದಿಯಲ್ಲಿ ‘ತಮ’ ಎಂಬ ಎರಡು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದು, ಈ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ.

ಆಂದೋಲನ ಡೆಸ್ಕ್

Recent Posts

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

5 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

5 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

6 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

6 hours ago

ಕೈ ಸಾಲವಾಗಿ 25 ಕೋಟಿ ನೀಡುವ ಆಮಿಷ : ಹುಬ್ಬಳ್ಳಿಯ ವ್ಯಕ್ತಿಗೆ ಮೈಸೂರಿನ ಐವರಿಂದ ಲಕ್ಷಾಂತರ ರೂ. ವಂಚನೆ

ಮೈಸೂರು : ಹುಬ್ಬಳ್ಳಿಯ ಹರ್ಷ ಎಂಬುವವರಿಗೆ ಕೈ ಸಾಲವಾಗಿ 25 ಕೋಟಿ ರೂ. ನೀಡುತ್ತೇವೆ ಎಂದು ಆಮಿಷವೊಡ್ಡಿ ಮೈಸೂರು ಮೂಲದ…

6 hours ago

ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯ : ನಾಗಲಕ್ಷ್ಮೀ ಚೌಧರಿ

ಮೈಸೂರು : ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿ ದುಡಿಯುತ್ತಿರುವ ಮಹಿಳೆಯರಿಗೆ ಋತುಚಕ್ರದ ರಜೆ ಕಡ್ಡಾಯವಾಗಿ ಕೊಡಬೇಕು. ಇಲ್ಲದಿದ್ದರೆ ಶಿಸ್ತು ಕ್ರಮ…

7 hours ago