Rashmika Mandanna Takes on a Fierce Avatar in the Film ‘Maisaa’…
ರಶ್ಮಿಕಾ ಮಂದಣ್ಣ ಸಿನಿಮಾ ಮೇಲೆ ಸಿನಿಮಾ ಮಾಡುತ್ತಿದ್ದಾರೆ. ಇತ್ತೀಚಿಗಷ್ತೇ ಅವರು ಹಿಂದಿಯ ‘ಕಾಕ್ಟೇಲ್ 2’ ಎಂಬ ಚಿತ್ರದಲ್ಲಿ ನಟಿಸುತ್ತಿರುವ ಸುದ್ದಿ ಬಂದಿತ್ತು. ಇದೀಗ ಅವರು ‘ಮೈಸಾ’ ಎಂಬ ಹೊಸ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದೊಂದು ಒಂದು ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಐದು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
‘ಮೈಸಾ’ ಚಿತ್ರದ ಘೋಷಣೆ ಇತ್ತೀಚೆಗೆ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಅಧಿಕೃತವಾಗಿ ಆಗಿದೆ. ವಿಶೇಷವೆಂದರೆ, ಒಂದೊಂದು ಭಾಷೆಯಲ್ಲಿ ಒಬ್ಬೊಬ್ಬ ಸೆಲೆಬ್ರಿಟಿ ಈ ಪೋಸ್ಟರ್ ಬಿಡುಡೆ ಮಾಡಿದ್ದಾರೆ. ತೆಲುಗಿನ ಪೋಸ್ಟರನ್ನು ನಿರ್ದೇಶಕ ಹನು ರಾಘವಪುಡಿ ಬಿಡುಗಡೆ ಮಾಡಿದರೆ, ತಮಿಳಿನಲ್ಲಿ ‘ಕುಬೇರ’ ನಟ ಧನುಷ್ ಬಿಡುಗಡೆ ಮಾಡಿದ್ದರೆ. ಕನ್ನಡದಲ್ಲಿ ಶಿವರಾಜಕುಮಾರ್, ಹಿಂದಿಯಲ್ಲಿ ವಿಕ್ಕಿ ಕೌಶಾಲ್ ಮತ್ತು ಮಲಯಾಳಂ ಪೋಸ್ಟರನ್ನು ದುಲ್ಕರ್ ಸಲ್ಮಾನ್ ಬಿಡುಗಡೆ ಮಾಡಿ ರಶ್ಮಿಕಾ ಮತ್ತು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ಇದುವರೆಗೂ ಸಾಫ್ಟ್ ಆದಂತಹ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ರಶ್ಮಿಕಾ, ಈ ಚಿತ್ರದಲ್ಲಿ ಉಗ್ರವಾತಾರ ತಾಳಿರುವುದು ವಿಶೇಷ. ಈ ಚಿತ್ರವನ್ನು ರವೀಂದ್ರ ಪುಲ್ಲೇ ನಿರ್ದೇಶನ ಮಾಡುತ್ತಿದ್ದು, ಅಜಯ್ ಹಾಗೂ ಅನಿಲ್ ಸಯ್ಯಾಪುರೆಡ್ಡಿ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ನಿರ್ದೇಶಕ ರವೀಂದ್ರ, ‘ಸುಮಾರು ಎರಡು ವರ್ಷಗಳ ಪರಿಶ್ರಮದಿಂದ ಈ ಕಥೆ ರೂಪುಗೊಂಡಿದೆ. ಸದ್ಯದಲ್ಲೇ ಚಿತ್ರೀಕರಣ ಪ್ರಾರಂಭವಾಗಲಿದೆ’ ಎಂದು ಹೇಳಿದ್ದಾರೆ.
ಇದಲ್ಲದೆ, ತೆಲುಗಿನಲ್ಲಿ ‘ದಿ ಗರ್ಲ್ಫ್ರೆಂಡ್’ ಮತ್ತು ಹಿಂದಿಯಲ್ಲಿ ‘ತಮ’ ಎಂಬ ಎರಡು ಚಿತ್ರಗಳಲ್ಲಿ ರಶ್ಮಿಕಾ ಅಭಿನಯಿಸಿದ್ದು, ಈ ಚಿತ್ರಗಳು ಇನ್ನಷ್ಟೇ ಬಿಡುಗಡೆ ಆಗಬೇಕಿವೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…