ಮನರಂಜನೆ

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ; ಮದುವೆ ಯಾವಾಗ?

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರು ಶುಕ್ರವಾರ (ಅ.3) ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ, ಟಾಲಿವುಡ್‌ನಲ್ಲಿ ದೀರ್ಘಕಾಲದಿಂದ ಅವರ ಡೇಟಿಂಗ್‌ ಬಗ್ಗೆ ಇದ್ದ ಊಹಾಪೋಹಗಳಿಗೆ ಒಂದು ಮಹತ್ವದ ತಿರುವು ನೀಡಿದೆ. ರಶ್ಮಿಕಾ ಆಗಲಿ, ಅಥವಾ ವಿಜಯ್‌ ದೇವರಕೊಂಡ ಆಗಲಿ, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇವರಿಬ್ಬರ ನಿಶ್ಚಿತಾರ್ಥವು ಆಪ್ತ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಈ ನಿಶ್ಚಿತಾರ್ಥದ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ಸುದ್ದಿಯು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಹಿಂದೆ ರಶ್ಮಿಕಾ ಮಂದಣ್ಣ ನಟ ರಕ್ಷಿತ್‌ ಶೆಟ್ಟಿ ಜೊತೆಗೆ ತಮ್ಮ ನಿಶ್ಚಿತಾರ್ಥವನ್ನ ಮುರಿದುಕೊಂಡಿದ್ದರು. ಇದೇ ಸಮಯದಲ್ಲಿ ʻಗೀತಾ ಗೋವಿಂದಂʼ ಚಿತ್ರದ ಸೆಟ್‌ನಲ್ಲಿ ವಿಜಯ್‌ ದೇವರಕೊಂಡ ಅವರನ್ನ ರಶ್ಮಿಕಾ ಭೇಟಿಯಾದರು. ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಚರ್ಚೆಯು ʻಡಿಯರ್‌ ಕಾಮ್ರೇಡ್‌ʼ ಚಿತ್ರದೊಂದಿಗೆ ಮತ್ತಷ್ಟು ತೀವ್ರಗೊಂಡಿತು. ಚಿತ್ರದಲ್ಲಿನ ಇವರಿಬ್ಬರ ಕೆಮಿಸ್ಟ್ರೀ ಪ್ರೇಕ್ಷಕರನ್ನ ಆಕರ್ಷಿಸಿತು. ಅಲ್ಲದೇ, ಇವರಿಬ್ಬರ ನಡುವಿನ ಲವ್‌ ಗಾಸಿಪ್‌ ಚರ್ಚೆಗೆ ಬಂದಿತು.

ಆಂದೋಲನ ಡೆಸ್ಕ್

Recent Posts

ದಿಲ್ಲಿ ಗಣರಾಜ್ಯೋತ್ಸವ ಸ್ತಬ್ಧಚಿತ್ರ 2026 : ಕೃಷಿ ಮತ್ತು ತಂತ್ರಜ್ಞಾನದ ಸಮಾಗಮ

ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…

6 hours ago

ಮ.ಬೆಟ್ಟ | ಪಾದಯಾತ್ರಿ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ ; ನಿಟ್ಟುಸಿರು ಬಿಟ್ಟ ಯಾತ್ರಾರ್ಥಿಗಳು

ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

6 hours ago

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಗುಡ್‌ನ್ಯೂಸ್‌ : 5 ವರ್ಷ ವಯೋಮಿತಿ ಸಡಿಲಿಕೆಗೆ ಸಚಿವ ಸಂಪುಟ ಒಪ್ಪಿಗೆ!

ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…

8 hours ago

ಇವಿ ವಾಹನ ಸವಾರರಿಗೆ ಸಿಹಿ ಸುದ್ದಿ : ಮಂಡ್ಯದಲ್ಲಿ ಮೊದಲ ಇವಿ ಫಾಸ್ಟ್‌ ಚಾರ್ಜಿಂಗ್‌ ಕೇಂದ್ರ ಆರಂಭ

ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…

8 hours ago

ಜಾ.ದಳ ಓಡಿಸಲು ಚಲುವರಾಯಸ್ವಾಮಿಗೆ ಸಾಧ್ಯವೇ? : ಜೆಡಿಎಸ್‌ ನಾಯಕ ಸುರೇಶ್‌ ಗೌಡ ಪ್ರಶ್ನೆ

ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…

9 hours ago

ಜಮೀನು ಕಬಳಿಕೆ ಪ್ರಕರಣ | ಸಚಿವ ಚಲುವರಾಯಸ್ವಾಮಿಯೇ ನೇರ ಹೊಣೆ : ಸುರೇಶ್‌ಗೌಡ ಆರೋಪ

ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…

9 hours ago