ಮನರಂಜನೆ

ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡ ರಶ್ಮಿಕಾ ಮಂದಣ್ಣ-ವಿಜಯ್‌ ದೇವರಕೊಂಡ ; ಮದುವೆ ಯಾವಾಗ?

ಬೆಂಗಳೂರು : ಟಾಲಿವುಡ್‌ ನಟ ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ನಿನ್ನೆ ಮೊನ್ನೆಯದಲ್ಲ. ಹಲವು ವರ್ಷಗಳಿಂದ ಇವರಿಬ್ಬರು ಪ್ರೀತಿಯಲ್ಲಿದ್ದಾರೆ, ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂದೆಲ್ಲಾ ಹೇಳಲಾಗುತ್ತಿತ್ತು. ಇದೀಗ ಇವರಿಬ್ಬರು ಗುಟ್ಟಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಮುಂದಿನ ವರ್ಷ ಹಸಮಣೆ ಏರಲಿದ್ದಾರೆ ಎಂದು ವರದಿಯಾಗಿದೆ.

ರಶ್ಮಿಕಾ ಮಂದಣ್ಣ ಮತ್ತು ವಿಜಯ್‌ ದೇವರಕೊಂಡ ಅವರು ಶುಕ್ರವಾರ (ಅ.3) ಹೈದರಾಬಾದ್‌ನಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸುದ್ದಿ, ಟಾಲಿವುಡ್‌ನಲ್ಲಿ ದೀರ್ಘಕಾಲದಿಂದ ಅವರ ಡೇಟಿಂಗ್‌ ಬಗ್ಗೆ ಇದ್ದ ಊಹಾಪೋಹಗಳಿಗೆ ಒಂದು ಮಹತ್ವದ ತಿರುವು ನೀಡಿದೆ. ರಶ್ಮಿಕಾ ಆಗಲಿ, ಅಥವಾ ವಿಜಯ್‌ ದೇವರಕೊಂಡ ಆಗಲಿ, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿಲ್ಲವಾದರೂ, ಇವರಿಬ್ಬರ ನಿಶ್ಚಿತಾರ್ಥವು ಆಪ್ತ ಕುಟುಂಬ ಸದಸ್ಯರ ಸಮ್ಮುಖದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:-ಮ.ಬೆಟ್ಟ | ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಲು ಖಂಡ್ರೆ ಸೂಚನೆ

2026ರ ಫೆಬ್ರವರಿಯಲ್ಲಿ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ. ಇಬ್ಬರು ಈ ನಿಶ್ಚಿತಾರ್ಥದ ಕುರಿತು ಯಾವುದೇ ಅಧಿಕೃತ ಹೇಳಿಕೆಯನ್ನ ಬಿಡುಗಡೆ ಮಾಡಿಲ್ಲ. ಆದಾಗ್ಯೂ, ಈ ಸುದ್ದಿಯು ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

ಈ ಹಿಂದೆ ರಶ್ಮಿಕಾ ಮಂದಣ್ಣ ನಟ ರಕ್ಷಿತ್‌ ಶೆಟ್ಟಿ ಜೊತೆಗೆ ತಮ್ಮ ನಿಶ್ಚಿತಾರ್ಥವನ್ನ ಮುರಿದುಕೊಂಡಿದ್ದರು. ಇದೇ ಸಮಯದಲ್ಲಿ ʻಗೀತಾ ಗೋವಿಂದಂʼ ಚಿತ್ರದ ಸೆಟ್‌ನಲ್ಲಿ ವಿಜಯ್‌ ದೇವರಕೊಂಡ ಅವರನ್ನ ರಶ್ಮಿಕಾ ಭೇಟಿಯಾದರು. ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ನಡುವಿನ ಸಂಬಂಧದ ಬಗ್ಗೆ ಚರ್ಚೆಯು ʻಡಿಯರ್‌ ಕಾಮ್ರೇಡ್‌ʼ ಚಿತ್ರದೊಂದಿಗೆ ಮತ್ತಷ್ಟು ತೀವ್ರಗೊಂಡಿತು. ಚಿತ್ರದಲ್ಲಿನ ಇವರಿಬ್ಬರ ಕೆಮಿಸ್ಟ್ರೀ ಪ್ರೇಕ್ಷಕರನ್ನ ಆಕರ್ಷಿಸಿತು. ಅಲ್ಲದೇ, ಇವರಿಬ್ಬರ ನಡುವಿನ ಲವ್‌ ಗಾಸಿಪ್‌ ಚರ್ಚೆಗೆ ಬಂದಿತು.

ಆಂದೋಲನ ಡೆಸ್ಕ್

Recent Posts

ಸಿಎಂಗೆ ವಿದ್ಯಾರ್ಥಿಗಳ ಪತ್ರ

ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…

35 mins ago

ದಿವ್ಯ ಎಂಬ ಅಂದಿನ ಕಾಲದ ಪಣ ಪರೀಕ್ಷೆ

ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…

41 mins ago

ಎಮ್ಮೆ ನಿನಗೆ ಸಾಟಿ ಇಲ್ಲ…

ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…

45 mins ago

ಭಾನುವಾರದ ಪುರವಣಿಗಳಲ್ಲಿ ಸಾಹಿತ್ಯ ಯಾಕೆ ಮಾಯ?

ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…

49 mins ago

ಹನೂರು: ಏಕಕಾಲದಲ್ಲೇ ಕಾಣಿಸಿಕೊಂಡ ಎರಡು ಚಿರತೆಗಳು

ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…

12 hours ago